<p><strong>ಬೆಂಗಳೂರು:</strong> ಜಯನಗರ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಮಂಗಳವಾರ ಗುಂಡು ಹಾರಿಸಿದ್ದಾರೆ.</p>.<p>ಮಹೇಶ್ ಹಾಗೂ ನವೀನ್ ಗುಂಡೇಟು ತಿಂದ ಆರೋಪಿಗಳು.</p>.<p>‘ಉತ್ತರಹಳ್ಳಿ ಬಳಿಯ ನಾಗಗೌಡನಪಾಳ್ಯದ ಬಳಿ ಘಟನೆ ನಡೆಯಿತು. ಕೊಲೆಗೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆಲು ಇವರನ್ನು ಮಹಜರಿಗೆ ಕರೆದೊಯ್ಯಲಾಗಿತ್ತು’.</p>.<p>‘ಈ ವೇಳೆ ಠಾಣೆಯ ಪಿಎಸ್ಐ ಚಂದನ್ ಕಾಳೆ ಮತ್ತು ಎಎಸ್ಐ ಲಕ್ಷ್ಮಣಾಚಾರಿ ಮೇಲೆ ಹಲ್ಲೆ ನಡೆಸಿ, ಅಲ್ಲಿಂದ ಪರಾರಿಯಾಗಲು ಆರೋಪಿಗಳು ಯತ್ನಿಸಿದರು. ಶರಣಾಗಲು ಸೂಚಿಸಿದರೂ ತಪ್ಪಿಸಿಕೊಳ್ಳುತ್ತಿದ್ದ ಇಬ್ಬರ ಕಾಲಿಗೂ ಇನ್ಸ್ಪೆಕ್ಟರ್ ಸುದರ್ಶನ್ ಗುಂಡು ಹಾರಿಸಿದರು’.</p>.<p>‘ಗುಂಡೇಟು ತಿಂದಿದ್ದ ಇಬ್ಬರನ್ನೂ ಆಂಬುಲೆನ್ಸ್ ಮೂಲಕ ಜಯನಗರ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಯಿತು. ಘಟನೆಯಲ್ಲಿ ಇಬ್ಬರು ಸಿಬ್ಬಂದಿಗೂ ಗಾಯಗಳಾಗಿವೆ’ ಎಂದು ಪೊಲೀಸರು ತಿಳಿಸಿದರು.</p>.<p>ತರಕಾರಿ ಖರೀದಿಸಲೆಂದು ಕಳೆದ ಶುಕ್ರವಾರ ಬಂದಿದ್ದಲಕ್ಕಸಂದ್ರ ನಿವಾಸಿ ಮದನ್ ಎಂಬುವರನ್ನು ಬನಶಂಕರಿ ದೇವಸ್ಥಾನ ಸಮೀಪ ಮಾರಕಾಸ್ತ್ರಗಳಿಂದ ಹೊಡೆದು, ಕೊಲೆ ಮಾಡಲಾಗಿತ್ತು. ಕೊಲೆಯ ದೃಶ್ಯ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ, ಇತ್ತೀಚೆಗೆ ಹರಿದಾಡಿತ್ತು. ಈ ಸಂಬಂಧ ಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಯನಗರ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಮಂಗಳವಾರ ಗುಂಡು ಹಾರಿಸಿದ್ದಾರೆ.</p>.<p>ಮಹೇಶ್ ಹಾಗೂ ನವೀನ್ ಗುಂಡೇಟು ತಿಂದ ಆರೋಪಿಗಳು.</p>.<p>‘ಉತ್ತರಹಳ್ಳಿ ಬಳಿಯ ನಾಗಗೌಡನಪಾಳ್ಯದ ಬಳಿ ಘಟನೆ ನಡೆಯಿತು. ಕೊಲೆಗೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆಲು ಇವರನ್ನು ಮಹಜರಿಗೆ ಕರೆದೊಯ್ಯಲಾಗಿತ್ತು’.</p>.<p>‘ಈ ವೇಳೆ ಠಾಣೆಯ ಪಿಎಸ್ಐ ಚಂದನ್ ಕಾಳೆ ಮತ್ತು ಎಎಸ್ಐ ಲಕ್ಷ್ಮಣಾಚಾರಿ ಮೇಲೆ ಹಲ್ಲೆ ನಡೆಸಿ, ಅಲ್ಲಿಂದ ಪರಾರಿಯಾಗಲು ಆರೋಪಿಗಳು ಯತ್ನಿಸಿದರು. ಶರಣಾಗಲು ಸೂಚಿಸಿದರೂ ತಪ್ಪಿಸಿಕೊಳ್ಳುತ್ತಿದ್ದ ಇಬ್ಬರ ಕಾಲಿಗೂ ಇನ್ಸ್ಪೆಕ್ಟರ್ ಸುದರ್ಶನ್ ಗುಂಡು ಹಾರಿಸಿದರು’.</p>.<p>‘ಗುಂಡೇಟು ತಿಂದಿದ್ದ ಇಬ್ಬರನ್ನೂ ಆಂಬುಲೆನ್ಸ್ ಮೂಲಕ ಜಯನಗರ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಯಿತು. ಘಟನೆಯಲ್ಲಿ ಇಬ್ಬರು ಸಿಬ್ಬಂದಿಗೂ ಗಾಯಗಳಾಗಿವೆ’ ಎಂದು ಪೊಲೀಸರು ತಿಳಿಸಿದರು.</p>.<p>ತರಕಾರಿ ಖರೀದಿಸಲೆಂದು ಕಳೆದ ಶುಕ್ರವಾರ ಬಂದಿದ್ದಲಕ್ಕಸಂದ್ರ ನಿವಾಸಿ ಮದನ್ ಎಂಬುವರನ್ನು ಬನಶಂಕರಿ ದೇವಸ್ಥಾನ ಸಮೀಪ ಮಾರಕಾಸ್ತ್ರಗಳಿಂದ ಹೊಡೆದು, ಕೊಲೆ ಮಾಡಲಾಗಿತ್ತು. ಕೊಲೆಯ ದೃಶ್ಯ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ, ಇತ್ತೀಚೆಗೆ ಹರಿದಾಡಿತ್ತು. ಈ ಸಂಬಂಧ ಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>