<p><strong>ಬೆಂಗಳೂರು</strong>: ಮಹಾರಾಷ್ಟ್ರದಿಂದ ಬಂದೂಕುಗಳನ್ನು ತಂದುನಗರದಲ್ಲಿ ಅಕ್ರಮವಾಗಿ ಮಾರುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.</p>.<p>ಆರ್.ಕೆ.ಹೆಗಡೆ ನಗರದ ಫಯಾಜ್ ಉಲ್ಲಾ (32), ಮಹಮ್ಮದ್ ಅಲಿ (32) ಹಾಗೂ ಸೈಯದ್ ಸಿರಾಜ್ ಅಹ್ಮದ್ (42) ಬಂಧಿತರು.</p>.<p>‘ಆರೋಪಿಗಳು ಮಹಾರಾಷ್ಟ್ರದ ಶಿರಡಿ ಬಳಿಯ ಕೊಪ್ಪರ್ಗಾವ್ ಪ್ರದೇಶದಿಂದ ಬಂದೂಕುಗಳನ್ನು ತರುತ್ತಿದ್ದರು. ಶೋಕಿಗಾಗಿ ಹಾಗೂ ಆತ್ಮರಕ್ಷಣೆಗಾಗಿ ಬಂದೂಕುಗಳನ್ನು ತಮ್ಮಲ್ಲಿ ಇಟ್ಟುಕೊಂಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದರು. ಈ ವೇಳೆ ಅವರ ಬಳಿ ಇದ್ದ ಮೂರು ನಾಡ ಬಂದೂಕುಗಳು ಹಾಗೂ 24 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಫಯಾಜ್ ಉಲ್ಲಾ ಸಂಪಿಗೆಹಳ್ಳಿ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ಮೇಲೆ ಆರು ಪ್ರಕರಣಗಳಿವೆ. ಈ ಹಿಂದೆಯೂ ಬಂದೂಕುಗಳನ್ನು ಹೊಂದಿದ್ದ ಆರೋಪ ಈತನ ಮೇಲಿತ್ತು. ಶಿವಾಜಿನಗರದ ರೌಡಿಶೀಟರ್ ಆಗಿರುವಮಹಮ್ಮದ್ ಅಲಿ ವಿರುದ್ಧ ನಾಲ್ಕು ಪ್ರಕರಣಗಳು ಹಾಗೂ ಸಿರಾಜ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದವು’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಹಾರಾಷ್ಟ್ರದಿಂದ ಬಂದೂಕುಗಳನ್ನು ತಂದುನಗರದಲ್ಲಿ ಅಕ್ರಮವಾಗಿ ಮಾರುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.</p>.<p>ಆರ್.ಕೆ.ಹೆಗಡೆ ನಗರದ ಫಯಾಜ್ ಉಲ್ಲಾ (32), ಮಹಮ್ಮದ್ ಅಲಿ (32) ಹಾಗೂ ಸೈಯದ್ ಸಿರಾಜ್ ಅಹ್ಮದ್ (42) ಬಂಧಿತರು.</p>.<p>‘ಆರೋಪಿಗಳು ಮಹಾರಾಷ್ಟ್ರದ ಶಿರಡಿ ಬಳಿಯ ಕೊಪ್ಪರ್ಗಾವ್ ಪ್ರದೇಶದಿಂದ ಬಂದೂಕುಗಳನ್ನು ತರುತ್ತಿದ್ದರು. ಶೋಕಿಗಾಗಿ ಹಾಗೂ ಆತ್ಮರಕ್ಷಣೆಗಾಗಿ ಬಂದೂಕುಗಳನ್ನು ತಮ್ಮಲ್ಲಿ ಇಟ್ಟುಕೊಂಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದರು. ಈ ವೇಳೆ ಅವರ ಬಳಿ ಇದ್ದ ಮೂರು ನಾಡ ಬಂದೂಕುಗಳು ಹಾಗೂ 24 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಫಯಾಜ್ ಉಲ್ಲಾ ಸಂಪಿಗೆಹಳ್ಳಿ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ಮೇಲೆ ಆರು ಪ್ರಕರಣಗಳಿವೆ. ಈ ಹಿಂದೆಯೂ ಬಂದೂಕುಗಳನ್ನು ಹೊಂದಿದ್ದ ಆರೋಪ ಈತನ ಮೇಲಿತ್ತು. ಶಿವಾಜಿನಗರದ ರೌಡಿಶೀಟರ್ ಆಗಿರುವಮಹಮ್ಮದ್ ಅಲಿ ವಿರುದ್ಧ ನಾಲ್ಕು ಪ್ರಕರಣಗಳು ಹಾಗೂ ಸಿರಾಜ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದವು’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>