<p><strong>ಬೆಂಗಳೂರು</strong>: ಐಷಾರಾಮಿ ಕಾರುಗಳನ್ನು ಮಾರಾಟ ಮಾಡಿಸಿ ಕೊಡುವುದಾಗಿ ಮಾಲೀಕರನ್ನು ನಂಬಿಸಿ, ಹಣ ನೀಡದೆ ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ನಸೀಬ್, ಮಹಮ್ಮದ್ ಆಜಂ ಹಾಗೂ ಮಹೀರ್ ಖಾನ್ ಬಂಧಿತರು.</p>.<p>‘ಕಾರುಗಳನ್ನು ಮಾರಾಟ ಮಾಡಿಸಿಕೊಡುತ್ತೇವೆ ಎಂದು ಮಾಲೀಕರಿಂದಐಷಾರಾಮಿ ಕಾರುಗಳನ್ನು ಆರೋಪಿಗಳು ಪಡೆಯುತ್ತಿದ್ದರು. ಮಾಲೀಕರ ಒಪ್ಪಿಗೆ ಇಲ್ಲದೆ, ಬೇರೆಯವರಿಗೆ ಮಾರುತ್ತಿದ್ದರು’ಎಂದು ಪೊಲೀಸರು ತಿಳಿಸಿದರು.</p>.<p>‘ಮಾಲೀಕರಿಗೆ ಹಣ ನೀಡದೆ ವಂಚಿಸುತ್ತಿದ್ದರು ಹಾಗೂ ಹಣ ಕೇಳುವ ಮಾಲೀಕರಿಗೆ ಬೆದರಿಕೆ ಹಾಕುತ್ತಿದ್ದರು. ಕಾರುಗಳ ಮಾರಾಟದಿಂದ ಹಣ ಪಡೆದುಕೊಂಡು ತಲೆಮರೆಸಿಕೊಳ್ಳುತ್ತಿದ್ದರು. ಈ ಸಂಬಂಧ ವೈಯಾಲಿಕಾವಲ್, ಪುಲಿಕೇಶಿ ನಗರ ಹಾಗೂ ಜ್ಞಾನಭಾರತಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು’ ಎಂದರು.</p>.<p>‘ಆರೋಪಿಗಳನ್ನು ಬಂಧಿಸಿ ಚಿತ್ರದುರ್ಗ, ದಾವಣಗೆರೆ, ಭಟ್ಕಳ, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಾರಾಟ ಮಾಡಿದ್ದ ₹ 3 ಕೋಟಿ ಬೆಲೆ ಬಾಳುವ 19 ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಐಷಾರಾಮಿ ಕಾರುಗಳನ್ನು ಮಾರಾಟ ಮಾಡಿಸಿ ಕೊಡುವುದಾಗಿ ಮಾಲೀಕರನ್ನು ನಂಬಿಸಿ, ಹಣ ನೀಡದೆ ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ನಸೀಬ್, ಮಹಮ್ಮದ್ ಆಜಂ ಹಾಗೂ ಮಹೀರ್ ಖಾನ್ ಬಂಧಿತರು.</p>.<p>‘ಕಾರುಗಳನ್ನು ಮಾರಾಟ ಮಾಡಿಸಿಕೊಡುತ್ತೇವೆ ಎಂದು ಮಾಲೀಕರಿಂದಐಷಾರಾಮಿ ಕಾರುಗಳನ್ನು ಆರೋಪಿಗಳು ಪಡೆಯುತ್ತಿದ್ದರು. ಮಾಲೀಕರ ಒಪ್ಪಿಗೆ ಇಲ್ಲದೆ, ಬೇರೆಯವರಿಗೆ ಮಾರುತ್ತಿದ್ದರು’ಎಂದು ಪೊಲೀಸರು ತಿಳಿಸಿದರು.</p>.<p>‘ಮಾಲೀಕರಿಗೆ ಹಣ ನೀಡದೆ ವಂಚಿಸುತ್ತಿದ್ದರು ಹಾಗೂ ಹಣ ಕೇಳುವ ಮಾಲೀಕರಿಗೆ ಬೆದರಿಕೆ ಹಾಕುತ್ತಿದ್ದರು. ಕಾರುಗಳ ಮಾರಾಟದಿಂದ ಹಣ ಪಡೆದುಕೊಂಡು ತಲೆಮರೆಸಿಕೊಳ್ಳುತ್ತಿದ್ದರು. ಈ ಸಂಬಂಧ ವೈಯಾಲಿಕಾವಲ್, ಪುಲಿಕೇಶಿ ನಗರ ಹಾಗೂ ಜ್ಞಾನಭಾರತಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು’ ಎಂದರು.</p>.<p>‘ಆರೋಪಿಗಳನ್ನು ಬಂಧಿಸಿ ಚಿತ್ರದುರ್ಗ, ದಾವಣಗೆರೆ, ಭಟ್ಕಳ, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಾರಾಟ ಮಾಡಿದ್ದ ₹ 3 ಕೋಟಿ ಬೆಲೆ ಬಾಳುವ 19 ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>