<p><strong>ಬೆಂಗಳೂರು:</strong> ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಮೇಲೆ ಇತ್ತೀಚೆಗೆ ನಡೆದಿದ್ದ ಹಲ್ಲೆ ಯತ್ನ ಪ್ರಕರಣದಲ್ಲಿಐದು ಮಂದಿ ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>‘ವಿವಿಧ ಠಾಣೆಗಳಲ್ಲಿ ರೌಡಿಶೀಟರ್ಗಳಾಗಿರುವ ದಿಲೀಪ್, ಅಭಿ, ಕಾರ್ತಿಕ್, ಪವನ್, ಭರತ್ ಬಂಧಿತರು. ಆರೋಪಿಗಳಿಂದ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜುಲೈ 29ರ ರಾತ್ರಿ ಜಾಲಹಳ್ಳಿಯಲ್ಲಿರುವಶಶಿಕುಮಾರ್ ಅವರ ನಿವಾಸದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಈ ವೇಳೆ ಶಶಿಕುಮಾರ್ ಅವರತೊಡೆ ಹಾಗೂ ಬಲಗೈಗೆ ಗಾಯವಾಗಿತ್ತು. ಆತ್ಮರಕ್ಷಣೆಗಾಗಿ ಶಶಿಕುಮಾರ್ ಪಿಸ್ತೂಲ್ ತೋರಿಸುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದರು. ಬಳಿಕ ಜಾಲಹಳ್ಳಿ ಠಾಣೆಗೆ ಶಶಿಕುಮಾರ್ ದೂರು ನೀಡಿದ್ದರು.</p>.<p>‘ಪತ್ತೆ ಕಾರ್ಯದ ವೇಳೆ ಆರೋಪಿಗಳ ಸುಳಿವು ಸಿಕ್ಕಿತ್ತು. ಆರು ತಿಂಗಳ ಹಿಂದೆ ಶಶಿಕುಮಾರ್ ಕೊಲೆಗೆ ಆರೋಪಿಗಳು ಸಂಚು ರೂಪಿಸಿದ್ದರು. ಇದಕ್ಕಾಗಿ ಶಶಿಕುಮಾರ್ ಮನೆ ಸಮೀಪದ ಮನೆಯೊಂದರಲ್ಲಿ ಆರೋಪಿಗಳು ಬಾಡಿಗೆಗೆ ಇದ್ದರು’ ಎಂದು ಪೊಲೀಸರು ವಿವರಿಸಿದರು.</p>.<p>‘ಮನೆ ಮೇಳೆ ದಾಳಿ ನಡೆಸಿ, ಕೃತ್ಯಕ್ಕೆ ಬಳಸಿದ್ದ ಒಂದು ಪಿಸ್ತೂಲ್, ಮೂರು ಜೀವಂತ ಗುಂಡುಗಳು, ಮಚ್ಚು ಮತ್ತು ಲಾಂಗುಗಳು, ಎರಡು ದ್ವಿಚಕ್ರ ವಾಹನ ಹಾಗೂ ಮೊಬೈಲ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಮೇಲೆ ಇತ್ತೀಚೆಗೆ ನಡೆದಿದ್ದ ಹಲ್ಲೆ ಯತ್ನ ಪ್ರಕರಣದಲ್ಲಿಐದು ಮಂದಿ ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>‘ವಿವಿಧ ಠಾಣೆಗಳಲ್ಲಿ ರೌಡಿಶೀಟರ್ಗಳಾಗಿರುವ ದಿಲೀಪ್, ಅಭಿ, ಕಾರ್ತಿಕ್, ಪವನ್, ಭರತ್ ಬಂಧಿತರು. ಆರೋಪಿಗಳಿಂದ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜುಲೈ 29ರ ರಾತ್ರಿ ಜಾಲಹಳ್ಳಿಯಲ್ಲಿರುವಶಶಿಕುಮಾರ್ ಅವರ ನಿವಾಸದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಈ ವೇಳೆ ಶಶಿಕುಮಾರ್ ಅವರತೊಡೆ ಹಾಗೂ ಬಲಗೈಗೆ ಗಾಯವಾಗಿತ್ತು. ಆತ್ಮರಕ್ಷಣೆಗಾಗಿ ಶಶಿಕುಮಾರ್ ಪಿಸ್ತೂಲ್ ತೋರಿಸುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದರು. ಬಳಿಕ ಜಾಲಹಳ್ಳಿ ಠಾಣೆಗೆ ಶಶಿಕುಮಾರ್ ದೂರು ನೀಡಿದ್ದರು.</p>.<p>‘ಪತ್ತೆ ಕಾರ್ಯದ ವೇಳೆ ಆರೋಪಿಗಳ ಸುಳಿವು ಸಿಕ್ಕಿತ್ತು. ಆರು ತಿಂಗಳ ಹಿಂದೆ ಶಶಿಕುಮಾರ್ ಕೊಲೆಗೆ ಆರೋಪಿಗಳು ಸಂಚು ರೂಪಿಸಿದ್ದರು. ಇದಕ್ಕಾಗಿ ಶಶಿಕುಮಾರ್ ಮನೆ ಸಮೀಪದ ಮನೆಯೊಂದರಲ್ಲಿ ಆರೋಪಿಗಳು ಬಾಡಿಗೆಗೆ ಇದ್ದರು’ ಎಂದು ಪೊಲೀಸರು ವಿವರಿಸಿದರು.</p>.<p>‘ಮನೆ ಮೇಳೆ ದಾಳಿ ನಡೆಸಿ, ಕೃತ್ಯಕ್ಕೆ ಬಳಸಿದ್ದ ಒಂದು ಪಿಸ್ತೂಲ್, ಮೂರು ಜೀವಂತ ಗುಂಡುಗಳು, ಮಚ್ಚು ಮತ್ತು ಲಾಂಗುಗಳು, ಎರಡು ದ್ವಿಚಕ್ರ ವಾಹನ ಹಾಗೂ ಮೊಬೈಲ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>