<p><strong>ಬೆಂಗಳೂರು:</strong> ಸಾಬೂನು ಬಾಕ್ಸ್ ಸೇರಿದಂತೆ ಪ್ಲಾಸ್ಟಿಕ್ ವಸ್ತುಗಳ ಮೂಲಕ ನಗರದಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಮಣಿಪುರದ ಮೂವರು ಆರೋಪಿಗಳನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>ಚಿಕ್ಕಬಾಣಸವಾಡಿಯಲ್ಲಿ ವಾಸವಿದ್ದ ಮೊಹಮ್ಮದ್ ಸಜ್ಜದ್ ಖಾನ್ (27), ಕಮ್ಮನಹಳ್ಳಿಯ ಮೊಹಮ್ಮದ್ ಅಜಾಜ್ (27) ಹಾಗೂ ಹೆಣ್ಣೂರು ವೃತ್ತದ ಸಪಂ ಸೀತಲ್ ಕುಮಾರ್ ಸಿಂಗ್ (25) ಬಂಧಿತರು.</p>.<p>‘ಠಾಣಾ ವ್ಯಾಪ್ತಿಯ ಕಬ್ಬನ್ ರಸ್ತೆಯ ಬಳಿಆರೋಪಿಗಳು ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತುಗಳನ್ನು ಇಟ್ಟುಕೊಂಡು, ಮಾರಾಟ ಮಾಡಲು ಯತ್ನಿಸಿದ್ದರು. ಈ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.</p>.<p>‘ಆರೋಪಿಗಳಿಂದ ₹10 ಲಕ್ಷ ಮೌಲ್ಯದ ಹೆರಾಯಿನ್, ₹50 ಲಕ್ಷ ಮೌಲ್ಯದ 2,800 ಪಿಲ್ಸ್ ಮಾತ್ರೆಗಳು, ₹9,500 ನಗದು, 10 ಸಾಬೂನು ಡಬ್ಬಿಗಳು, 170 ಪ್ಲಾಸ್ಟಿಕ್ ಡಬ್ಬಿಗಳು, ಮೂರು ಬ್ಯಾಗ್, ನಾಲ್ಕು ಮೊಬೈಲ್ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಸಜ್ಜದ್ ಹಾಗೂ ಅಜಾಜ್ ಶಿವಾಜಿನಗರದ ಮಾಂಸದ ಅಂಗಡಿಯಲ್ಲಿ ದಿನಗೂಲಿ ಕೆಲಸ ಮಾಡಿಕೊಂಡಿದ್ದರು. ಸೀತಲ್ ಕುಮಾರ್ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾಬೂನು ಬಾಕ್ಸ್ ಸೇರಿದಂತೆ ಪ್ಲಾಸ್ಟಿಕ್ ವಸ್ತುಗಳ ಮೂಲಕ ನಗರದಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಮಣಿಪುರದ ಮೂವರು ಆರೋಪಿಗಳನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>ಚಿಕ್ಕಬಾಣಸವಾಡಿಯಲ್ಲಿ ವಾಸವಿದ್ದ ಮೊಹಮ್ಮದ್ ಸಜ್ಜದ್ ಖಾನ್ (27), ಕಮ್ಮನಹಳ್ಳಿಯ ಮೊಹಮ್ಮದ್ ಅಜಾಜ್ (27) ಹಾಗೂ ಹೆಣ್ಣೂರು ವೃತ್ತದ ಸಪಂ ಸೀತಲ್ ಕುಮಾರ್ ಸಿಂಗ್ (25) ಬಂಧಿತರು.</p>.<p>‘ಠಾಣಾ ವ್ಯಾಪ್ತಿಯ ಕಬ್ಬನ್ ರಸ್ತೆಯ ಬಳಿಆರೋಪಿಗಳು ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತುಗಳನ್ನು ಇಟ್ಟುಕೊಂಡು, ಮಾರಾಟ ಮಾಡಲು ಯತ್ನಿಸಿದ್ದರು. ಈ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.</p>.<p>‘ಆರೋಪಿಗಳಿಂದ ₹10 ಲಕ್ಷ ಮೌಲ್ಯದ ಹೆರಾಯಿನ್, ₹50 ಲಕ್ಷ ಮೌಲ್ಯದ 2,800 ಪಿಲ್ಸ್ ಮಾತ್ರೆಗಳು, ₹9,500 ನಗದು, 10 ಸಾಬೂನು ಡಬ್ಬಿಗಳು, 170 ಪ್ಲಾಸ್ಟಿಕ್ ಡಬ್ಬಿಗಳು, ಮೂರು ಬ್ಯಾಗ್, ನಾಲ್ಕು ಮೊಬೈಲ್ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಸಜ್ಜದ್ ಹಾಗೂ ಅಜಾಜ್ ಶಿವಾಜಿನಗರದ ಮಾಂಸದ ಅಂಗಡಿಯಲ್ಲಿ ದಿನಗೂಲಿ ಕೆಲಸ ಮಾಡಿಕೊಂಡಿದ್ದರು. ಸೀತಲ್ ಕುಮಾರ್ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>