<p><strong>ಬೆಂಗಳೂರು:</strong> ಹಗಲು ವೇಳೆ ಹಣ್ಣಿನ ವ್ಯಾಪಾರ ಮಾಡಿಕೊಂಡು, ರಾತ್ರಿ ವೇಳೆ ಮನೆಗೆ ನುಗ್ಗಿ ಚಿನ್ನದ ಆಭರಣ, ನಗದು ದೋಚಿ ಪರಾರಿ ಆಗುತ್ತಿದ್ದ ಆರೋಪಿಯನ್ನು ಮಹದೇವಪುರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>ಮೊಹಮ್ಮದ್ ತಂಜೀಮ್ (33) ಬಂಧಿತ ಆರೋಪಿ.</p>.<p>ಬಂಧಿತ ಆರೋಪಿಯಿಂದ ₹29.40 ಲಕ್ಷ ಮೌಲ್ಯದ 245 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಠಾಣಾ ವ್ಯಾಪ್ತಿಯ ಬಡಾವಣೆಯೊಂದರಲ್ಲಿ ಆರೋಪಿ ನೆಲಸಿದ್ದ ಎಂದು ಮೂಲಗಳು ಹೇಳಿವೆ.</p>.<p>ಡಿಆರ್ಡಿಒ ಟೌನ್ಶಿಪ್ನ ನಿವಾಸಿ ಮ್ಯಾಥ್ಯು ಅವರ ಮನೆಗೆ ಆರೋಪಿ ನುಗ್ಗಿ ಕಳ್ಳತನ ಮಾಡಿದ್ದ. ಮ್ಯಾಥ್ಯು ಅವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಸಿ.ವಿ ರಾಮನ್ ನಗರದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ಕಳ್ಳತನ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.</p>.<p>‘ಕಳವು ಮಾಡಿದ್ದ ಚಿನ್ನಾಭರಣಗಳ ಪೈಕಿ ಕೆಲವು ಆಭರಣಗಳನ್ನು ಮನೆಯಲ್ಲಿಟ್ಟಿದ್ದ. ಉಳಿದವನ್ನು ಪುಲಕೇಶಿನಗರದ ಜ್ಯೂವೆಲರಿ ಅಂಗಡಿಯೊಂದಕ್ಕೆ ಮಾರಾಟ ಮಾಡಿದ್ದ. ಅಲ್ಲಿಂದ ಆಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>ಆರೋಪಿ ಮನೆಯಿಂದ 169 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಹಾಗೂ ಜ್ಯೂವೆಲರಿ ಅಂಗಡಿಯಿಂದ 75 ಗ್ರಾಂ ಆಭರಣ ಸೇರಿದಂತೆ ಒಟ್ಟು 245 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಮಹದೇವಪುರ ಠಾಣೆಯ ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿ ವಿರುದ್ಧ ಈ ಹಿಂದೆ ಮೈಸೂರಿನ ನರಸಿಂಹರಾಜಪುರ ಪೊಲೀಸ್ ಠಾಣೆ ಹಾಗೂ ಕೇರಳದ ಎರಡು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ಗೊತ್ತಾಗಿದೆ.</p>.<p>ಹಗಲು ವೇಳೆ ತಳ್ಳು ಗಾಡಿಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಆರೋಪಿ ಬೀಗ ಹಾಕಿದ ಮನೆಗಳನ್ನು ಗುರುತಿಸುತ್ತಿದ್ದ. ರಾತ್ರಿ ವೇಳೆ ಆ ಮನೆಗೆ ಬಂದು ಕನ್ನ ಹಾಕುತ್ತಿದ್ದ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಗಲು ವೇಳೆ ಹಣ್ಣಿನ ವ್ಯಾಪಾರ ಮಾಡಿಕೊಂಡು, ರಾತ್ರಿ ವೇಳೆ ಮನೆಗೆ ನುಗ್ಗಿ ಚಿನ್ನದ ಆಭರಣ, ನಗದು ದೋಚಿ ಪರಾರಿ ಆಗುತ್ತಿದ್ದ ಆರೋಪಿಯನ್ನು ಮಹದೇವಪುರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>ಮೊಹಮ್ಮದ್ ತಂಜೀಮ್ (33) ಬಂಧಿತ ಆರೋಪಿ.</p>.<p>ಬಂಧಿತ ಆರೋಪಿಯಿಂದ ₹29.40 ಲಕ್ಷ ಮೌಲ್ಯದ 245 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಠಾಣಾ ವ್ಯಾಪ್ತಿಯ ಬಡಾವಣೆಯೊಂದರಲ್ಲಿ ಆರೋಪಿ ನೆಲಸಿದ್ದ ಎಂದು ಮೂಲಗಳು ಹೇಳಿವೆ.</p>.<p>ಡಿಆರ್ಡಿಒ ಟೌನ್ಶಿಪ್ನ ನಿವಾಸಿ ಮ್ಯಾಥ್ಯು ಅವರ ಮನೆಗೆ ಆರೋಪಿ ನುಗ್ಗಿ ಕಳ್ಳತನ ಮಾಡಿದ್ದ. ಮ್ಯಾಥ್ಯು ಅವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಸಿ.ವಿ ರಾಮನ್ ನಗರದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ಕಳ್ಳತನ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.</p>.<p>‘ಕಳವು ಮಾಡಿದ್ದ ಚಿನ್ನಾಭರಣಗಳ ಪೈಕಿ ಕೆಲವು ಆಭರಣಗಳನ್ನು ಮನೆಯಲ್ಲಿಟ್ಟಿದ್ದ. ಉಳಿದವನ್ನು ಪುಲಕೇಶಿನಗರದ ಜ್ಯೂವೆಲರಿ ಅಂಗಡಿಯೊಂದಕ್ಕೆ ಮಾರಾಟ ಮಾಡಿದ್ದ. ಅಲ್ಲಿಂದ ಆಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>ಆರೋಪಿ ಮನೆಯಿಂದ 169 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಹಾಗೂ ಜ್ಯೂವೆಲರಿ ಅಂಗಡಿಯಿಂದ 75 ಗ್ರಾಂ ಆಭರಣ ಸೇರಿದಂತೆ ಒಟ್ಟು 245 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಮಹದೇವಪುರ ಠಾಣೆಯ ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿ ವಿರುದ್ಧ ಈ ಹಿಂದೆ ಮೈಸೂರಿನ ನರಸಿಂಹರಾಜಪುರ ಪೊಲೀಸ್ ಠಾಣೆ ಹಾಗೂ ಕೇರಳದ ಎರಡು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ಗೊತ್ತಾಗಿದೆ.</p>.<p>ಹಗಲು ವೇಳೆ ತಳ್ಳು ಗಾಡಿಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಆರೋಪಿ ಬೀಗ ಹಾಕಿದ ಮನೆಗಳನ್ನು ಗುರುತಿಸುತ್ತಿದ್ದ. ರಾತ್ರಿ ವೇಳೆ ಆ ಮನೆಗೆ ಬಂದು ಕನ್ನ ಹಾಕುತ್ತಿದ್ದ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>