<p>ಬೆಂಗಳೂರು: ಅಡುಗೆ ತಯಾರಿಸುವ ವಿಚಾರದಲ್ಲಿ ಬಾಣಸಿಗರಿಬ್ಬರ ನಡುವೆ ನಡೆದ ಜಗಳದಲ್ಲಿ ಒಬ್ಬ ಕೊಲೆಯಾಗಿರುವ ಘಟನೆ ಜೆ.ಪಿ.ನಗರ ಠಾಣಾ ವ್ಯಾಪ್ತಿಯ ವಾಲ್ಸ್ಟ್ರೀಟ್ ಪಬ್ನಲ್ಲಿ ನಡೆದಿದೆ.</p>.<p>ಪಶ್ಚಿಮ ಬಂಗಾಳದ ಸಾಗರ್ (22) ಮೃತಪಟ್ಟಿರುವ ಬಾಣಸಿಗ. ಮೌಸಿಕ್ ಚಾಕುವಿನಿಂದ ಇರಿದು ಪರಾರಿಯಾಗಿರುವ ಆರೋಪಿ.</p>.<p>‘ಸಾಗರ್ ಹಾಗೂ ಮೌಸಿಕ್ ಪಬ್ನಲ್ಲಿ ಶೆಫ್ಗಳಾಗಿ (ಬಾಣಸಿಗ) ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ ಅಡುಗೆ ಮಾಡುವ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು’.</p>.<p>‘ಸರಿಯಾಗಿ ಕೆಲಸ ಮಾಡುತ್ತಿಲ್ಲವೆಂದು ಮೌಸಿಕ್ ಮೇಲೆ ಸಾಗರ್ ಗಲಾಟೆ ಮಾಡಿದ್ದ. ಈ ವೇಳೆ ಕೋಪಗೊಂಡಿದ್ದಮೌಸಿಕ್, ಚಾಕುವಿನಿಂದ ಸಾಗರ್ ಅವರ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಇರಿದಿದ್ದ.ಗಾಯಗೊಂಡಿದ್ದ ಸಾಗರ್ ಅವರನ್ನುಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟರು’ ಎಂದು ಮೂಲಗಳು ತಿಳಿಸಿವೆ.</p>.<p>ಘಟನೆ ನಂತರಮೌಸಿಕ್ ಅಲ್ಲಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಜೆ.ಪಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಅಡುಗೆ ತಯಾರಿಸುವ ವಿಚಾರದಲ್ಲಿ ಬಾಣಸಿಗರಿಬ್ಬರ ನಡುವೆ ನಡೆದ ಜಗಳದಲ್ಲಿ ಒಬ್ಬ ಕೊಲೆಯಾಗಿರುವ ಘಟನೆ ಜೆ.ಪಿ.ನಗರ ಠಾಣಾ ವ್ಯಾಪ್ತಿಯ ವಾಲ್ಸ್ಟ್ರೀಟ್ ಪಬ್ನಲ್ಲಿ ನಡೆದಿದೆ.</p>.<p>ಪಶ್ಚಿಮ ಬಂಗಾಳದ ಸಾಗರ್ (22) ಮೃತಪಟ್ಟಿರುವ ಬಾಣಸಿಗ. ಮೌಸಿಕ್ ಚಾಕುವಿನಿಂದ ಇರಿದು ಪರಾರಿಯಾಗಿರುವ ಆರೋಪಿ.</p>.<p>‘ಸಾಗರ್ ಹಾಗೂ ಮೌಸಿಕ್ ಪಬ್ನಲ್ಲಿ ಶೆಫ್ಗಳಾಗಿ (ಬಾಣಸಿಗ) ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ ಅಡುಗೆ ಮಾಡುವ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು’.</p>.<p>‘ಸರಿಯಾಗಿ ಕೆಲಸ ಮಾಡುತ್ತಿಲ್ಲವೆಂದು ಮೌಸಿಕ್ ಮೇಲೆ ಸಾಗರ್ ಗಲಾಟೆ ಮಾಡಿದ್ದ. ಈ ವೇಳೆ ಕೋಪಗೊಂಡಿದ್ದಮೌಸಿಕ್, ಚಾಕುವಿನಿಂದ ಸಾಗರ್ ಅವರ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಇರಿದಿದ್ದ.ಗಾಯಗೊಂಡಿದ್ದ ಸಾಗರ್ ಅವರನ್ನುಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟರು’ ಎಂದು ಮೂಲಗಳು ತಿಳಿಸಿವೆ.</p>.<p>ಘಟನೆ ನಂತರಮೌಸಿಕ್ ಅಲ್ಲಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಜೆ.ಪಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>