‘ಆರೋಪಿ ಜೈವೀರು, ಆತನ ಸ್ನೇಹಿತರಾದ ಅವಿನಾಶ್, ಮೋಸಿನ್ ಖಾನ್ ಬಂಧಿತರು. ಕೊಲೆ ಪ್ರಕರಣದಲ್ಲಿ ತನಿಖೆ ನಡೆಸಿದ್ದ ಪೊಲೀಸರು, ‘ಆರೋಪಿಗಳು ಪತ್ತೆಯಾಗಿಲ್ಲ’ ಎಂದು ನ್ಯಾಯಾಲಯಕ್ಕೆ ಸಿ–ರಿಪೋರ್ಟ್ ಸಲ್ಲಿಸಿದ್ದರು. ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೃತ್ಯ ಎಸಗಿದ್ದ ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರ ಬೆರಳಚ್ಚು ಪರಿಶೀಲಿಸಿದಾಗ, 15 ವರ್ಷಗಳ ಹಿಂದೆ ನಡೆದಿದ್ದ ಕೊಲೆ ರಹಸ್ಯ ಬಯಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.