<p><strong>ಬೆಂಗಳೂರು:</strong> ಮೈದಾನದಲ್ಲಿ ನಿಲ್ಲಿಸಿದ್ದ ‘ರೋಡ್ ರೋಲರ್’ ಕದ್ದು ಗುಜರಿ ವ್ಯಾಪಾರಿಗೆ ಮಾರಾಟ ಮಾಡಿದ್ದ ಇಬ್ಬರು ಆರೋಪಿಗಳ ಪೈಕಿ ಒಬ್ಬನನ್ನು ಚಂದ್ರಾ ಬಡಾವಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ನಾಗರಬಾವಿ ನಿವಾಸಿ ಪವನ್ ಕುಮಾರ್ (22) ಬಂಧಿತ ಆರೋಪಿ. ಕೃತ್ಯದಲ್ಲಿ ಭಾಗಿಯಾಗಿದ್ದ ವಿನಯ್ ಎಂಬ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.</p>.<p>ತಮಿಳುನಾಡಿನವರಾದ ವಾಹನದ ಮಾಲೀಕ ಲಾಕ್ಡೌನ್ ಇದ್ದಿದ್ದರಿಂದ ನಾಗರಬಾವಿಯ ಖಾಲಿ ಮೈದಾನದಲ್ಲಿ ವಾಹನ ನಿಲ್ಲಿಸಿ, ಊರಿಗೆ ತೆರಳಿದ್ದರು. ಮತ್ತೆ ಬಂದು ನೋಡಿದಾಗ ವಾಹನ ಆ ಜಾಗದಲ್ಲಿ ಅಲ್ಲಿರಲಿಲ್ಲ. ಮಾಲೀಕ ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಆರೋಪಿ ಪವನ್ ಹಾಗೂ ವಿನಯ್ ವಾಹನ ಕದ್ದೊಯ್ದು, ಮಾಗಡಿ ರಸ್ತೆಯ ಸೀಗೆಹಳ್ಳಿಯ ಗುಜರಿ ವ್ಯಾಪಾರಿ ಇಸ್ಮಾಯಿಲ್ಗೆ ಮಾರಿದ್ದರು. ವಾಹನ ಪೂರ್ಣ ಕಬ್ಬಿಣದಲ್ಲೇ ಇದ್ದಿದ್ದರಿಂದ ತೂಕದ ಲೆಕ್ಕದಲ್ಲಿ ಮಾರಾಟ ಮಾಡಿ ಹಣ ಪಡೆದಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಖರೀದಿಸಿದ ನಂತರ ಗುಜರಿಗೆ ಹಾಕಲು ವಾಹನದ ಬಿಡಿಭಾಗಗಳನ್ನು ತೆಗೆದು ತೂಕ ಹಾಕಲಾಗಿತ್ತು. ಸದ್ಯ ವಾಹನವನ್ನು ಜಪ್ತಿ ಮಾಡಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಯನ್ನು ಪತ್ತೆ ಮಾಡಲಾಗುತ್ತಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೈದಾನದಲ್ಲಿ ನಿಲ್ಲಿಸಿದ್ದ ‘ರೋಡ್ ರೋಲರ್’ ಕದ್ದು ಗುಜರಿ ವ್ಯಾಪಾರಿಗೆ ಮಾರಾಟ ಮಾಡಿದ್ದ ಇಬ್ಬರು ಆರೋಪಿಗಳ ಪೈಕಿ ಒಬ್ಬನನ್ನು ಚಂದ್ರಾ ಬಡಾವಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ನಾಗರಬಾವಿ ನಿವಾಸಿ ಪವನ್ ಕುಮಾರ್ (22) ಬಂಧಿತ ಆರೋಪಿ. ಕೃತ್ಯದಲ್ಲಿ ಭಾಗಿಯಾಗಿದ್ದ ವಿನಯ್ ಎಂಬ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.</p>.<p>ತಮಿಳುನಾಡಿನವರಾದ ವಾಹನದ ಮಾಲೀಕ ಲಾಕ್ಡೌನ್ ಇದ್ದಿದ್ದರಿಂದ ನಾಗರಬಾವಿಯ ಖಾಲಿ ಮೈದಾನದಲ್ಲಿ ವಾಹನ ನಿಲ್ಲಿಸಿ, ಊರಿಗೆ ತೆರಳಿದ್ದರು. ಮತ್ತೆ ಬಂದು ನೋಡಿದಾಗ ವಾಹನ ಆ ಜಾಗದಲ್ಲಿ ಅಲ್ಲಿರಲಿಲ್ಲ. ಮಾಲೀಕ ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಆರೋಪಿ ಪವನ್ ಹಾಗೂ ವಿನಯ್ ವಾಹನ ಕದ್ದೊಯ್ದು, ಮಾಗಡಿ ರಸ್ತೆಯ ಸೀಗೆಹಳ್ಳಿಯ ಗುಜರಿ ವ್ಯಾಪಾರಿ ಇಸ್ಮಾಯಿಲ್ಗೆ ಮಾರಿದ್ದರು. ವಾಹನ ಪೂರ್ಣ ಕಬ್ಬಿಣದಲ್ಲೇ ಇದ್ದಿದ್ದರಿಂದ ತೂಕದ ಲೆಕ್ಕದಲ್ಲಿ ಮಾರಾಟ ಮಾಡಿ ಹಣ ಪಡೆದಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಖರೀದಿಸಿದ ನಂತರ ಗುಜರಿಗೆ ಹಾಕಲು ವಾಹನದ ಬಿಡಿಭಾಗಗಳನ್ನು ತೆಗೆದು ತೂಕ ಹಾಕಲಾಗಿತ್ತು. ಸದ್ಯ ವಾಹನವನ್ನು ಜಪ್ತಿ ಮಾಡಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಯನ್ನು ಪತ್ತೆ ಮಾಡಲಾಗುತ್ತಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>