‘ಆಗಸ್ಟ್ 26ರಂದು ಆರೋಪಿ ಬಾಲಕಿಯನ್ನು ತನ್ನ ಬಳಿ ಕರೆಸಿಕೊಂಡಿದ್ದ. ದೇವಸ್ಥಾನಕ್ಕೆ ತೆರಳದ ಆರೋಪಿ, ಬನ್ನೇರುಘಟ್ಟ ಬಳಿಯ ಮನೆಯೊಂದಕ್ಕೆ ಬಾಲಕಿಯನ್ನು ಕರೆದೊಯ್ದಿದ್ದ. ಅದೇ ಮನೆಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಸಂಜೆಯಾದರೂ ಬಾಲಕಿ ಮನೆಗೆ ವಾಪಸು ಹೋಗಿರಲಿಲ್ಲ. ಗಾಬರಿಗೊಂಡ ಪೋಷಕರು, ಬಾಲಕಿ ನಾಪತ್ತೆ ಬಗ್ಗೆ ಠಾಣೆಗೆ ದೂರು ನೀಡಿದ್ದರು’ ಎಂದೂ ಮೂಲಗಳು ತಿಳಿಸಿವೆ.