<p><strong>ಬೆಂಗಳೂರು: </strong>ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಹಲವು ಅಪರಾಧ ಪ್ರಕರಣಗಳ ಆರೋಪಿ ರೌಡಿಶೀಟರ್ ಸೂರ್ಯನನ್ನು ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬುಧವಾರ ಬಂಧಿಸಿದ್ದಾರೆ.</p>.<p>‘ಎಚ್ಆರ್ಬಿಆರ್ ಬಡಾವಣೆಯಲ್ಲಿ ಸೂರ್ಯನನ್ನು ಬಂಧಿಸಲು ಮುಂದಾದಾಗ ಸಿಸಿಬಿ ಹೆಡ್ ಕಾನ್ಸ್ಟೆಬಲ್ ಹನುಮೇಶ್ ಮೇಲೆ ಸೂರ್ಯ ಹಲ್ಲೆಗೆ ಯತ್ನಿಸಿದ. ಈ ವೇಳೆ ಆತ್ಮರಕ್ಷಣೆಗಾಗಿ ಸಿಸಿಬಿ ಎಸಿಪಿ ಪರಮೇಶ್ವರ್ ಸೂರ್ಯನ ಕಾಲಿಗೆ ಗುಂಡು ಹಾರಿಸಿದರು. ಬಳಿಕ ಆತನನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಯಿತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಈತನ ವಿರುದ್ಧರಾಮಮೂರ್ತಿ ನಗರ, ಕೆ.ಜಿ.ಹಳ್ಳಿ, ಪುಲಿಕೇಶಿನಗರ ಠಾಣೆಗಳಲ್ಲಿ ಹಲವು ಕೊಲೆ ಪ್ರಕರಣಗಳು ದಾಖಲಾಗಿದ್ದವು.</p>.<p>ಇತ್ತೀಚೆಗೆಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹಲ್ಲೆ ಪ್ರಕರಣದಲ್ಲೂ ಸೂರ್ಯ ಹಾಗೂ ಆತನ ಸಹಚರರು ಭಾಗಿಯಾಗಿದ್ದರು. ಈ ಸಂಬಂಧ ಸಿಸಿಬಿ ಎಸಿಪಿ ನೇತೃತ್ವದ ತಂಡ ಇವರ ಪತ್ತೆಗೆ ತೆರಳಿತ್ತು. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಮನೆಯೊಂದರಲ್ಲಿ ಇರುವುದನ್ನು ತಿಳಿದು ಬಂಧಿಸಿದ್ದರು. ಆದರೆ, ಪ್ರಮುಖ ಆರೋಪಿಯಾಗಿದ್ದ ಸೂರ್ಯ ತಲೆಮರೆಸಿಕೊಂಡಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಹಲವು ಅಪರಾಧ ಪ್ರಕರಣಗಳ ಆರೋಪಿ ರೌಡಿಶೀಟರ್ ಸೂರ್ಯನನ್ನು ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬುಧವಾರ ಬಂಧಿಸಿದ್ದಾರೆ.</p>.<p>‘ಎಚ್ಆರ್ಬಿಆರ್ ಬಡಾವಣೆಯಲ್ಲಿ ಸೂರ್ಯನನ್ನು ಬಂಧಿಸಲು ಮುಂದಾದಾಗ ಸಿಸಿಬಿ ಹೆಡ್ ಕಾನ್ಸ್ಟೆಬಲ್ ಹನುಮೇಶ್ ಮೇಲೆ ಸೂರ್ಯ ಹಲ್ಲೆಗೆ ಯತ್ನಿಸಿದ. ಈ ವೇಳೆ ಆತ್ಮರಕ್ಷಣೆಗಾಗಿ ಸಿಸಿಬಿ ಎಸಿಪಿ ಪರಮೇಶ್ವರ್ ಸೂರ್ಯನ ಕಾಲಿಗೆ ಗುಂಡು ಹಾರಿಸಿದರು. ಬಳಿಕ ಆತನನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಯಿತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಈತನ ವಿರುದ್ಧರಾಮಮೂರ್ತಿ ನಗರ, ಕೆ.ಜಿ.ಹಳ್ಳಿ, ಪುಲಿಕೇಶಿನಗರ ಠಾಣೆಗಳಲ್ಲಿ ಹಲವು ಕೊಲೆ ಪ್ರಕರಣಗಳು ದಾಖಲಾಗಿದ್ದವು.</p>.<p>ಇತ್ತೀಚೆಗೆಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹಲ್ಲೆ ಪ್ರಕರಣದಲ್ಲೂ ಸೂರ್ಯ ಹಾಗೂ ಆತನ ಸಹಚರರು ಭಾಗಿಯಾಗಿದ್ದರು. ಈ ಸಂಬಂಧ ಸಿಸಿಬಿ ಎಸಿಪಿ ನೇತೃತ್ವದ ತಂಡ ಇವರ ಪತ್ತೆಗೆ ತೆರಳಿತ್ತು. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಮನೆಯೊಂದರಲ್ಲಿ ಇರುವುದನ್ನು ತಿಳಿದು ಬಂಧಿಸಿದ್ದರು. ಆದರೆ, ಪ್ರಮುಖ ಆರೋಪಿಯಾಗಿದ್ದ ಸೂರ್ಯ ತಲೆಮರೆಸಿಕೊಂಡಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>