ಇತ್ತೀಚೆಗೆಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹಲ್ಲೆ ಪ್ರಕರಣದಲ್ಲೂ ಸೂರ್ಯ ಹಾಗೂ ಆತನ ಸಹಚರರು ಭಾಗಿಯಾಗಿದ್ದರು. ಈ ಸಂಬಂಧ ಸಿಸಿಬಿ ಎಸಿಪಿ ನೇತೃತ್ವದ ತಂಡ ಇವರ ಪತ್ತೆಗೆ ತೆರಳಿತ್ತು. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಮನೆಯೊಂದರಲ್ಲಿ ಇರುವುದನ್ನು ತಿಳಿದು ಬಂಧಿಸಿದ್ದರು. ಆದರೆ, ಪ್ರಮುಖ ಆರೋಪಿಯಾಗಿದ್ದ ಸೂರ್ಯ ತಲೆಮರೆಸಿಕೊಂಡಿದ್ದ.