ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವವಿವಾಹಿತೆ ಆತ್ಮಹತ್ಯೆ: ಪತಿ ವಿರುದ್ಧ ಎಫ್‌ಐಆರ್

Last Updated 12 ಮಾರ್ಚ್ 2021, 16:15 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ವನಜಾಕ್ಷಿ (25) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದು, ಕಿರುಕುಳ ನೀಡಿದ ಆರೋಪದಡಿ ಪತಿ ನಾಗರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ.

‘ಬೇಕರಿ ವ್ಯಾಪಾರಿ ನಾಗರಾಜ್ ಹಾಗೂ ವನಜಾಕ್ಷಿ ಎಂಟು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಗುರುವಾರ ಮಧ್ಯಾಹ್ನ ಮನೆಯ ಕಿಟಕಿಗೆ ನೇಣು ಹಾಕಿಕೊಂಡು ವನಜಾಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೋಷಕರು ನೀಡಿರುವ ದೂರು ಆಧರಿಸಿ ನಾಗರಾಜ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ವಿದ್ಯಾರಣ್ಯಪುರ ಪೊಲೀಸರು ಹೇಳಿದರು.

‘ಲಾಕ್‌ಡೌನ್‌ನಿಂದಾಗಿ ಬೇಕರಿಯಲ್ಲಿ ನಷ್ಟವಾಗಿತ್ತು. ತವರು ಮನೆಯಿಂದ ಹಣ ತರುವಂತೆ ನಾಗರಾಜ್ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಮನೆಯಲ್ಲಿ ನಿತ್ಯವೂ ಜಗಳ ನಡೆಯುತ್ತಿತ್ತು. ಈ ಸಂಗತಿ ದೂರಿನಲ್ಲಿದೆ. ಪತಿ ತಲೆಮರೆಸಿಕೊಂಡಿದ್ದಾನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT