‘ದೂರುದಾರ ಮಹಿಳೆಯ ಪತಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಶಸ್ತ್ರಚಿಕಿತ್ಸೆಗಾಗಿ ಹಣ ಹೊಂದಿಸಿಕೊಂಡಿದ್ದ ಮಹಿಳೆ, ಶಿವಮೊಗ್ಗದಿಂದ ಬಸ್ಸಿನಲ್ಲಿ ಇದೇ 13ರಂದು ಬೆಳಿಗ್ಗೆ ಬೆಂಗಳೂರಿಗೆ ಬಂದು ಮೆಜೆಸ್ಟಿಕ್ ನಿಲ್ದಾಣದಲ್ಲಿ ಇಳಿದಿದ್ದರು. ಅದೇ ಸಂದರ್ಭದಲ್ಲಿ ಆರೋಪಿಗಳು, ಹಣ ಹಾಗೂ ಚಿನ್ನದ ಸರವಿದ್ದ ವ್ಯಾನಿಟಿ ಬ್ಯಾಗ್ ಕದ್ದು ಪರಾರಿಯಾಗಿದ್ದರು.’