<p><strong>ಬೆಂಗಳೂರು:</strong> ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿ ಜಾಮೀನು ಮೇಲೆ ಹೊರಬಂದು ಕಳ್ಳತನ ಮಾಡುತ್ತಿದ್ದ ಆರೋಪಿ ರಫೀಕ್ ಅಲಿಯಾಸ್ ಸೇಟುನನ್ನು (29) ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ತುಮಕೂರಿನ ರಫೀಕ್, ಅಪರಾಧ ಹಿನ್ನೆಲೆಯುಳ್ಳವ. ಕೆಲ ಪ್ರಕರಣಗಳಲ್ಲಿ ಈತನನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿತ್ತು. ಕೆಲದಿನ ಜೈಲಿನಲ್ಲಿದ್ದು ಹೊರಗೆ ಬಂದಿದ್ದ ಈತ, ಪುನಃ ಕಳ್ಳತನ ಮುಂದುವರಿಸಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ರಾಜಾಜಿನಗರ ಠಾಣೆ ವ್ಯಾಪ್ತಿಯಲ್ಲಿರುವ ಪ್ರಕಾಶನಗರದಲ್ಲಿರುವ ದಿನಸಿ ಅಂಗಡಿಯೊಂದರಲ್ಲಿ ಇತ್ತೀಚೆಗೆ ಕಳ್ಳತನ ನಡೆದಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ. ಈತನಿಂದ ₹ 22.08 ಲಕ್ಷ ಮೌಲ್ಯದ 409 ಗ್ರಾಂ ಚಿನ್ನಾಭರಣ, 425 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ 189 ಗ್ರಾಂ ನಕಲಿ ಚಿನ್ನದ ಆಭರಣಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ ರಫೀಕ್, ಕೆ.ಆರ್. ಪುರದಲ್ಲಿ ವಾಸವಿದ್ದ. ಆರಂಭದಲ್ಲಿ ಸಣ್ಣಪುಟ್ಟ ಕೆಲಸ ಮಾಡುತ್ತಿದ್ದ. ದುಡಿದ ಹಣ ಖರ್ಚಿಗೆ ಸಾಲದೆ ಕಳ್ಳತನಕ್ಕೆ ಇಳಿದಿದ್ದ. ನಂತರ, ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ’ ಎಂದು ಹೇಳಿವೆ.</p>.<p><strong>ಬೀಗ ಮುರಿದು ಕಳ್ಳತನ:</strong> ‘ದೂರುದಾರ ತಮ್ಮ ದಿನಸಿ ಅಂಗಡಿಗೆ ರಾತ್ರಿ ಬೀಗ ಹಾಕಿಕೊಂಡು ಮನೆಗೆ ಹೋಗಿದ್ದರು. ಮರುದಿನ ಬೆಳಿಗ್ಗೆ ಅಂಗಡಿಗೆ ಬಂದಾಗ ಕಳ್ಳತನ ಗಮನಕ್ಕೆ ಬಂದಿತ್ತು. ಬೀಗ ಮುರಿದಿದ್ದ ಆರೋಪಿ, ಒಳಗೆ ನುಗ್ಗಿ ₹ 50 ಸಾವಿರ ನಗದು ಕದ್ದು ಪರಾರಿಯಾಗಿದ್ದ’ ಎಂದು ತಿಳಿಸಿವೆ.</p>.<p>‘ಪೀಣ್ಯ, ಗಿರಿನಗರ, ಕಬ್ಬನ್ ಪಾರ್ಕ್, ಕೆ.ಆರ್. ಪುರ, ಬನಶಂಕರಿ, ಅಮೃತಹಳ್ಳಿ, ಕಾಡುಗೊಂಡನಹಳ್ಳಿ, ಚಂದ್ರಾ ಲೇಔಟ್ ಠಾಣೆ ವ್ಯಾಪ್ತಿಯಲ್ಲೂ ಆರೋಪಿ ಕೃತ್ಯ ಎಸಗಿದ್ದ. ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ನೆಲಮಂಗಲ, ತಿಪಟೂರು ಠಾಣೆಗಳಲ್ಲೂ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿರುವ ಬಗ್ಗೆ ಮಾಹಿತಿ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿ ಜಾಮೀನು ಮೇಲೆ ಹೊರಬಂದು ಕಳ್ಳತನ ಮಾಡುತ್ತಿದ್ದ ಆರೋಪಿ ರಫೀಕ್ ಅಲಿಯಾಸ್ ಸೇಟುನನ್ನು (29) ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ತುಮಕೂರಿನ ರಫೀಕ್, ಅಪರಾಧ ಹಿನ್ನೆಲೆಯುಳ್ಳವ. ಕೆಲ ಪ್ರಕರಣಗಳಲ್ಲಿ ಈತನನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿತ್ತು. ಕೆಲದಿನ ಜೈಲಿನಲ್ಲಿದ್ದು ಹೊರಗೆ ಬಂದಿದ್ದ ಈತ, ಪುನಃ ಕಳ್ಳತನ ಮುಂದುವರಿಸಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ರಾಜಾಜಿನಗರ ಠಾಣೆ ವ್ಯಾಪ್ತಿಯಲ್ಲಿರುವ ಪ್ರಕಾಶನಗರದಲ್ಲಿರುವ ದಿನಸಿ ಅಂಗಡಿಯೊಂದರಲ್ಲಿ ಇತ್ತೀಚೆಗೆ ಕಳ್ಳತನ ನಡೆದಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ. ಈತನಿಂದ ₹ 22.08 ಲಕ್ಷ ಮೌಲ್ಯದ 409 ಗ್ರಾಂ ಚಿನ್ನಾಭರಣ, 425 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ 189 ಗ್ರಾಂ ನಕಲಿ ಚಿನ್ನದ ಆಭರಣಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ ರಫೀಕ್, ಕೆ.ಆರ್. ಪುರದಲ್ಲಿ ವಾಸವಿದ್ದ. ಆರಂಭದಲ್ಲಿ ಸಣ್ಣಪುಟ್ಟ ಕೆಲಸ ಮಾಡುತ್ತಿದ್ದ. ದುಡಿದ ಹಣ ಖರ್ಚಿಗೆ ಸಾಲದೆ ಕಳ್ಳತನಕ್ಕೆ ಇಳಿದಿದ್ದ. ನಂತರ, ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ’ ಎಂದು ಹೇಳಿವೆ.</p>.<p><strong>ಬೀಗ ಮುರಿದು ಕಳ್ಳತನ:</strong> ‘ದೂರುದಾರ ತಮ್ಮ ದಿನಸಿ ಅಂಗಡಿಗೆ ರಾತ್ರಿ ಬೀಗ ಹಾಕಿಕೊಂಡು ಮನೆಗೆ ಹೋಗಿದ್ದರು. ಮರುದಿನ ಬೆಳಿಗ್ಗೆ ಅಂಗಡಿಗೆ ಬಂದಾಗ ಕಳ್ಳತನ ಗಮನಕ್ಕೆ ಬಂದಿತ್ತು. ಬೀಗ ಮುರಿದಿದ್ದ ಆರೋಪಿ, ಒಳಗೆ ನುಗ್ಗಿ ₹ 50 ಸಾವಿರ ನಗದು ಕದ್ದು ಪರಾರಿಯಾಗಿದ್ದ’ ಎಂದು ತಿಳಿಸಿವೆ.</p>.<p>‘ಪೀಣ್ಯ, ಗಿರಿನಗರ, ಕಬ್ಬನ್ ಪಾರ್ಕ್, ಕೆ.ಆರ್. ಪುರ, ಬನಶಂಕರಿ, ಅಮೃತಹಳ್ಳಿ, ಕಾಡುಗೊಂಡನಹಳ್ಳಿ, ಚಂದ್ರಾ ಲೇಔಟ್ ಠಾಣೆ ವ್ಯಾಪ್ತಿಯಲ್ಲೂ ಆರೋಪಿ ಕೃತ್ಯ ಎಸಗಿದ್ದ. ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ನೆಲಮಂಗಲ, ತಿಪಟೂರು ಠಾಣೆಗಳಲ್ಲೂ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿರುವ ಬಗ್ಗೆ ಮಾಹಿತಿ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>