ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಕಳ್ಳನ ಬಂಧನ: ಐದು ಬೈಕ್ ವಶ

Last Updated 25 ಮಾರ್ಚ್ 2021, 2:48 IST
ಅಕ್ಷರ ಗಾತ್ರ

ಬೆಂಗಳೂರು: ಮನೆಗಳ ಸಮೀಪ ನಿಲ್ಲಿಸಿರುವ ವಾಹನಗಳ ಬೀಗ ಮುರಿದು, ರಾತ್ರಿ ವೇಳೆ ಕದ್ದೊಯ್ಯುತ್ತಿದ್ದ ಆರೋಪಿಯನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ.

ಜೆ.ಪಿ.ನಗರ ಸಮೀಪದ ರಾಗಿಗುಡ್ಡದ ಕೊಳೆಗೇರಿ ನಿವಾಸಿ ಮಾರಿಮುತ್ತು (24) ಬಂಧಿತ ಆರೋಪಿ.

‘ಪರಪ್ಪನ ಅಗ್ರಹಾರ, ಜೆ.ಜೆ.ನಗರ, ಆಡುಗೋಡಿ ಠಾಣೆಗಳ ಸರಹದ್ದಿನಲ್ಲಿ ಕಳವು ಮಾಡಿದ್ದ ವಾಹನಗಳನ್ನು ಮಾರಲು ಯತ್ನಿಸುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಯಿತು.ಕಳವಾಗಿದ್ದ ಐದು ದ್ವಿಚಕ್ರ ವಾಹನಗಳನ್ನು ಆರೋಪಿಯಿಂದ ಜಪ್ತಿ ಮಾಡಲಾಗಿದೆ’ಎಂದು ಪೊಲೀಸರು ತಿಳಿಸಿದರು.

‘ಈತ ಈ ಹಿಂದೆ ಮೈಕೊ ಬಡಾವಣೆ, ಜೆ.ಪಿ.ನಗರ ಠಾಣಾ ವ್ಯಾಪ್ತಿಗಳಲ್ಲಿ ನಡೆದಿದ್ದ ಕಳವು ಪ್ರಕರಣಗಳಲ್ಲಿ ಜೈಲಿಗೆ ಹೋಗಿದ್ದ. ಅಲ್ಲಿಂದ ಹೊರ ಬಂದ ನಂತರವೂ ಕಳ್ಳತನ ಮುಂದುವರಿಸಿದ್ದ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT