‘ಆರೋಪಿ ಹೇಮಂತ್, ಜಗದೀಶ್ ಅವರ ಕಪಾಳಕ್ಕೆ ಹೊಡೆದಿದ್ದರು. ಸ್ಥಳದಲ್ಲೇ ಕುಸಿದು ಬಿದ್ದಿದ್ದ ಜಗದೀಶ್ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆ ನೀಡಿದ್ದ ವೈದ್ಯರು, ಜಗದೀಶ್ ಬದುಕುವುದಿಲ್ಲವೆಂದು ತಿಳಿಸಿದ್ದರು. ಹೀಗಾಗಿ, ಸಂಬಂಧಿಕರು ಮನೆಗೆ ಕರೆತಂದಿದ್ದರು. ಜ. 16ರಂದು ಅವರು ಮೃತಪಟ್ಟಿದ್ದಾರೆ’ ಎಂದು ಮೂಲಗಳು ಹೇಳಿವೆ.