<p><strong>ಬೆಂಗಳೂರು</strong>: ‘ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಮಹಜರು ವೇಳೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದಡಿ ಹನುಮಂತ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು.</p>.<p>ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು,‘ಆರೋಪಿ ಪೊಲೀಸರ ವಶದಿಂದ ತಪ್ಪಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಧಿಕಾರಿಗಳ ನಿರ್ಲಕ್ಷ್ಯವೂ ಇದಕ್ಕೆ ಕಾರಣ. ಹಾಗಾಗಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದರು.</p>.<p>‘ಘಟನೆ ನಡೆದ ವೇಳೆ ನಾಲ್ವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದರು. ಆದರೂ ಇಂತಹ ಪ್ರಕರಣ ನಡೆದಿದೆ. ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ತನಿಖೆ ನಡೆಯುತ್ತಿದೆ. ಇದರಿಂದ ಬರುವ ವರದಿ ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು. ಸದ್ಯಕ್ಕೆ ಇಲಾಖೆಯ ಮಟ್ಟದಲ್ಲಿ ತನಿಖೆಯಾಗುತ್ತಿದೆ’ ಎಂದು ಹೇಳಿದರು.</p>.<p class="Subhead"><strong>ಏನಿದು ಪ್ರಕರಣ?: </strong>ಬಿಡಿಎ ನಿವೇಶನ ಕೊಡಿಸುವುದಾಗಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಸಿದ್ಧಲಿಂಗಸ್ವಾಮಿ ಎಂಬುವರನ್ನುಹನುಮಂತ ನಗರ ಠಾಣೆಯಪೊಲೀಸರು ಇತ್ತೀಚೆಗೆ ಬಂಧಿಸಿ,ಕಸ್ಟಡಿಗೆ ಪಡೆದಿದ್ದರು. ತನಿಖೆ ವೇಳೆ ತನ್ನ ಮನೆಯಲ್ಲಿ ಕೆಲವು ಪ್ರಕರಣಕ್ಕೆ ಸಂಬಂಧಿಸಿದ ಕೆಲವು ವಸ್ತುಗಳು ಇರುವುದಾಗಿ ಆರೋಪಿ ಹೇಳಿದ್ದ.</p>.<p>ಇದಕ್ಕಾಗಿ ಮಹಜರು ನಡೆಸಲು ಸಿದ್ದಲಿಂಗಸ್ವಾಮಿಯನ್ನು ವಿದ್ಯಾರಣ್ಯಪುರದಲ್ಲಿದ್ದ ಮನೆಗೆ ಶುಕ್ರವಾರ (ಫೆ.26) ಕರೆ ತಂದಿದ್ದರು. ಈ ವೇಳೆ ಎರಡನೇ ಮಹಡಿಯಿಂದ ಆರೋಪಿ ಜಿಗಿದು, ಆತ್ಮಹತ್ಯೆಗೆ ಯತ್ನಿಸಿದ್ದರು. ರಕ್ತಸ್ರಾವ ಸ್ಥಿತಿಯಲ್ಲೇ ಆಸ್ಪತ್ರೆಗೆ ಕರೆದೊಯ್ಯವಾಗ ಮಾರ್ಗಮಧ್ಯೆ ಮೃತಪಟ್ಟಿದ್ದರು.</p>.<p>ಆತ್ಮಹತ್ಯೆ ಸಂಬಂಧ ವಿದ್ಯಾರಣ್ಯಪುರ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ. ಆರೋಪಿ ಆತ್ಮಹತ್ಯೆಯ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಮಹಜರು ವೇಳೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದಡಿ ಹನುಮಂತ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು.</p>.<p>ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು,‘ಆರೋಪಿ ಪೊಲೀಸರ ವಶದಿಂದ ತಪ್ಪಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಧಿಕಾರಿಗಳ ನಿರ್ಲಕ್ಷ್ಯವೂ ಇದಕ್ಕೆ ಕಾರಣ. ಹಾಗಾಗಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದರು.</p>.<p>‘ಘಟನೆ ನಡೆದ ವೇಳೆ ನಾಲ್ವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದರು. ಆದರೂ ಇಂತಹ ಪ್ರಕರಣ ನಡೆದಿದೆ. ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ತನಿಖೆ ನಡೆಯುತ್ತಿದೆ. ಇದರಿಂದ ಬರುವ ವರದಿ ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದು. ಸದ್ಯಕ್ಕೆ ಇಲಾಖೆಯ ಮಟ್ಟದಲ್ಲಿ ತನಿಖೆಯಾಗುತ್ತಿದೆ’ ಎಂದು ಹೇಳಿದರು.</p>.<p class="Subhead"><strong>ಏನಿದು ಪ್ರಕರಣ?: </strong>ಬಿಡಿಎ ನಿವೇಶನ ಕೊಡಿಸುವುದಾಗಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಸಿದ್ಧಲಿಂಗಸ್ವಾಮಿ ಎಂಬುವರನ್ನುಹನುಮಂತ ನಗರ ಠಾಣೆಯಪೊಲೀಸರು ಇತ್ತೀಚೆಗೆ ಬಂಧಿಸಿ,ಕಸ್ಟಡಿಗೆ ಪಡೆದಿದ್ದರು. ತನಿಖೆ ವೇಳೆ ತನ್ನ ಮನೆಯಲ್ಲಿ ಕೆಲವು ಪ್ರಕರಣಕ್ಕೆ ಸಂಬಂಧಿಸಿದ ಕೆಲವು ವಸ್ತುಗಳು ಇರುವುದಾಗಿ ಆರೋಪಿ ಹೇಳಿದ್ದ.</p>.<p>ಇದಕ್ಕಾಗಿ ಮಹಜರು ನಡೆಸಲು ಸಿದ್ದಲಿಂಗಸ್ವಾಮಿಯನ್ನು ವಿದ್ಯಾರಣ್ಯಪುರದಲ್ಲಿದ್ದ ಮನೆಗೆ ಶುಕ್ರವಾರ (ಫೆ.26) ಕರೆ ತಂದಿದ್ದರು. ಈ ವೇಳೆ ಎರಡನೇ ಮಹಡಿಯಿಂದ ಆರೋಪಿ ಜಿಗಿದು, ಆತ್ಮಹತ್ಯೆಗೆ ಯತ್ನಿಸಿದ್ದರು. ರಕ್ತಸ್ರಾವ ಸ್ಥಿತಿಯಲ್ಲೇ ಆಸ್ಪತ್ರೆಗೆ ಕರೆದೊಯ್ಯವಾಗ ಮಾರ್ಗಮಧ್ಯೆ ಮೃತಪಟ್ಟಿದ್ದರು.</p>.<p>ಆತ್ಮಹತ್ಯೆ ಸಂಬಂಧ ವಿದ್ಯಾರಣ್ಯಪುರ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ. ಆರೋಪಿ ಆತ್ಮಹತ್ಯೆಯ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>