<p><strong>ಬೆಂಗಳೂರು: </strong>ತ್ರಿಪುರಾದಿಂದ ರೈಲಿನ ಮೂಲಕ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ಮೂವರು ಆರೋಪಿ ಗಳನ್ನು ಶ್ರೀರಾಮಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘ತ್ರಿಪುರಾದ ಜಾವೀದ್ ಹುಸೇನ್ (23), ಮುಸ್ಸಾಮೀಯಾ (23) ಹಾಗೂ ಅಬ್ದುಲ್ ಮುಸ್ನಾದ್ (22) ಬಂಧಿತರು. ಇವರಿಂದ 15 ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ ಆರೋಪಿಗಳು, ಭದ್ರತಾ ಏಜೆನ್ಸಿಗಳಿಗೆ ಸೇರಿದ್ದರು. ಖಾಸಗಿ ಕಂಪನಿ ಹಾಗೂ ವಿವಿಧ ಅಪಾರ್ಟ್ಮೆಂಟ್ ಸಮುಚ್ಚಯಗಳಲ್ಲಿ ಭದ್ರತೆಗೆ ಆರೋಪಿ ಗಳನ್ನು ನಿಯೋಜಿಸಲಾಗುತ್ತಿತ್ತು. ಭದ್ರತಾ ಕೆಲಸದ ಜೊತೆಯಲ್ಲೇ ಆರೋಪಿಗಳು, ಗಾಂಜಾ ಮಾರಿ ಹಣ ಸಂಪಾದಿಸುತ್ತಿದ್ದರು’ ಎಂದೂ ತಿಳಿಸಿದರು.</p>.<p>‘ಆರೋಪಿಗಳು ತ್ರಿಪುರಾಗೆ ಆಗಾಗ ರೈಲಿನಲ್ಲಿ ಹೋಗಿ ಬರುತ್ತಿದ್ದರು. ಗಾಂಜಾ ಪೊಟ್ಟಣಗಳನ್ನು ಬ್ಯಾಗ್ನಲ್ಲಿರಿಸಿಕೊಂಡು ನಗರಕ್ಕೆ ತರುತ್ತಿದ್ದರು. ಪರಿಚಯಸ್ಥರ ಮೂಲಕ ಗಾಂಜಾವನ್ನು ಗ್ರಾಹಕರಿಗೆ ಮಾರುತ್ತಿದ್ದರೆಂಬ ಸಂಗತಿ ತನಿಖೆಯಿಂದ ಗೊತ್ತಾಗಿದೆ’ ಎಂದೂ ಹೇಳಿದರು.</p>.<p>‘ಶ್ರೀರಾಮಪುರ ಠಾಣೆ ವ್ಯಾಪ್ತಿಯಲ್ಲಿ ಬೈಕ್ನಲ್ಲಿ ಆರೋಪಿಗಳು ಗಾಂಜಾ ಸಾಗಿಸುತ್ತಿದ್ದರು. ಕಾರ್ಯಾಚರಣೆ ನಡೆಸಿ ಗಾಂಜಾ ಸಮೇತ ಆರೋಪಿಗಳನ್ನು ಬಂಧಿಸಲಾಯಿತು’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ತ್ರಿಪುರಾದಿಂದ ರೈಲಿನ ಮೂಲಕ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ಮೂವರು ಆರೋಪಿ ಗಳನ್ನು ಶ್ರೀರಾಮಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘ತ್ರಿಪುರಾದ ಜಾವೀದ್ ಹುಸೇನ್ (23), ಮುಸ್ಸಾಮೀಯಾ (23) ಹಾಗೂ ಅಬ್ದುಲ್ ಮುಸ್ನಾದ್ (22) ಬಂಧಿತರು. ಇವರಿಂದ 15 ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ ಆರೋಪಿಗಳು, ಭದ್ರತಾ ಏಜೆನ್ಸಿಗಳಿಗೆ ಸೇರಿದ್ದರು. ಖಾಸಗಿ ಕಂಪನಿ ಹಾಗೂ ವಿವಿಧ ಅಪಾರ್ಟ್ಮೆಂಟ್ ಸಮುಚ್ಚಯಗಳಲ್ಲಿ ಭದ್ರತೆಗೆ ಆರೋಪಿ ಗಳನ್ನು ನಿಯೋಜಿಸಲಾಗುತ್ತಿತ್ತು. ಭದ್ರತಾ ಕೆಲಸದ ಜೊತೆಯಲ್ಲೇ ಆರೋಪಿಗಳು, ಗಾಂಜಾ ಮಾರಿ ಹಣ ಸಂಪಾದಿಸುತ್ತಿದ್ದರು’ ಎಂದೂ ತಿಳಿಸಿದರು.</p>.<p>‘ಆರೋಪಿಗಳು ತ್ರಿಪುರಾಗೆ ಆಗಾಗ ರೈಲಿನಲ್ಲಿ ಹೋಗಿ ಬರುತ್ತಿದ್ದರು. ಗಾಂಜಾ ಪೊಟ್ಟಣಗಳನ್ನು ಬ್ಯಾಗ್ನಲ್ಲಿರಿಸಿಕೊಂಡು ನಗರಕ್ಕೆ ತರುತ್ತಿದ್ದರು. ಪರಿಚಯಸ್ಥರ ಮೂಲಕ ಗಾಂಜಾವನ್ನು ಗ್ರಾಹಕರಿಗೆ ಮಾರುತ್ತಿದ್ದರೆಂಬ ಸಂಗತಿ ತನಿಖೆಯಿಂದ ಗೊತ್ತಾಗಿದೆ’ ಎಂದೂ ಹೇಳಿದರು.</p>.<p>‘ಶ್ರೀರಾಮಪುರ ಠಾಣೆ ವ್ಯಾಪ್ತಿಯಲ್ಲಿ ಬೈಕ್ನಲ್ಲಿ ಆರೋಪಿಗಳು ಗಾಂಜಾ ಸಾಗಿಸುತ್ತಿದ್ದರು. ಕಾರ್ಯಾಚರಣೆ ನಡೆಸಿ ಗಾಂಜಾ ಸಮೇತ ಆರೋಪಿಗಳನ್ನು ಬಂಧಿಸಲಾಯಿತು’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>