<p><strong>ಬೆಂಗಳೂರು:</strong> ಮನೆಯೊಂದಕ್ಕೆ ನುಗ್ಗಿ ಮಹಿಳೆಯ ಕೈ–ಕಾಲು ಕಟ್ಟಿಹಾಕಿ ದರೋಡೆ ಮಾಡಿದ್ದ ಆರೋಪದಡಿ ಅಣ್ಣ–ತಮ್ಮನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ತಿಂಡ್ಲು ಮುಖ್ಯರಸ್ತೆಯ ಬಸವಸಮಿತಿ ಲೇಔಟ್ ನಿವಾಸಿ ಅರವಿಂದ್ (30) ಹಾಗೂ ಬಸವನಗುಡಿ ಬಿ.ಪಿ. ವಾಡಿಯಾ ರಸ್ತೆಯ ನಿವಾಸಿ ಅವಿನಾಶ್ (34) ಬಂಧಿತರು. ಅವರಿಂದ 123.77 ಗ್ರಾಂ ತೂಕದ ಚಿನ್ನಾಭರಣ, 3 ಕೆ.ಜಿ ಬೆಳ್ಳಿ ಸಾಮಗ್ರಿ ಹಾಗೂ ₹40 ಸಾವಿರ ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಸುಭಾಷ್ ಎಂಬುವರು ಪತ್ನಿ ಜಯಶ್ರೀ ಜೊತೆ ಬಸವ ಸಮಿತಿ ಲೇಔಟ್ನ ಮನೆಯಲ್ಲಿ ವಾಸವಿದ್ದರು. ಅವರಿಗೆ ಸೇರಿದ್ದ ಮನೆಯಲ್ಲೇ ಬಾಡಿಗೆಗೆ ಇದ್ದ ಆರೋಪಿ ಅರವಿಂದ್ ಕೃತ್ಯ ಎಸಗಿದ್ದ’ ಎಂದೂ ತಿಳಿಸಿದರು.</p>.<p><strong>ಬಟ್ಟೆ ವ್ಯಾಪಾರದಲ್ಲಿ ನಷ್ಟ:</strong> ‘ಆರೋಪಿ, ಸಾಲ ಮಾಡಿ ಬಟ್ಟೆ ವ್ಯಾಪಾರ ಆರಂಭಿಸಿದ್ದ. ಅದರಲ್ಲಿ ನಷ್ಟ ಅನುಭವಿಸಿದ್ದ ಕಾರಣಕ್ಕೆ ಕೃತ್ಯಕ್ಕೆ ಸಂಚು ರೂಪಿಸಿದ್ದ’ ಎಂದಿದ್ದಾರೆ.</p>.<p>ಕೃತ್ಯ ನಡೆದ ದಿನ ಪೊಲೀಸರ ತಂಡ ಮನೆಗೆ ಹೋದಾಗಲೂ ಆರೋಪಿ ಸ್ಥಳದಲ್ಲಿದ್ದ. ತನಗೇನು ಗೊತ್ತಿಲ್ಲದಂತೆ ನಟಿಸಿದ್ದ. ಆರೋಪಿಗಳು ಜಯಶ್ರೀ ಅವರನ್ನು ಹಿಂದಿನಿಂದ ಹಿಡಿದುಕೊಂಡು ಕಟ್ಟಿಹಾಕಿದ್ದರು. ಅವರೂ ಆರೋಪಿಗಳನ್ನು ನೋಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮನೆಯೊಂದಕ್ಕೆ ನುಗ್ಗಿ ಮಹಿಳೆಯ ಕೈ–ಕಾಲು ಕಟ್ಟಿಹಾಕಿ ದರೋಡೆ ಮಾಡಿದ್ದ ಆರೋಪದಡಿ ಅಣ್ಣ–ತಮ್ಮನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ತಿಂಡ್ಲು ಮುಖ್ಯರಸ್ತೆಯ ಬಸವಸಮಿತಿ ಲೇಔಟ್ ನಿವಾಸಿ ಅರವಿಂದ್ (30) ಹಾಗೂ ಬಸವನಗುಡಿ ಬಿ.ಪಿ. ವಾಡಿಯಾ ರಸ್ತೆಯ ನಿವಾಸಿ ಅವಿನಾಶ್ (34) ಬಂಧಿತರು. ಅವರಿಂದ 123.77 ಗ್ರಾಂ ತೂಕದ ಚಿನ್ನಾಭರಣ, 3 ಕೆ.ಜಿ ಬೆಳ್ಳಿ ಸಾಮಗ್ರಿ ಹಾಗೂ ₹40 ಸಾವಿರ ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಸುಭಾಷ್ ಎಂಬುವರು ಪತ್ನಿ ಜಯಶ್ರೀ ಜೊತೆ ಬಸವ ಸಮಿತಿ ಲೇಔಟ್ನ ಮನೆಯಲ್ಲಿ ವಾಸವಿದ್ದರು. ಅವರಿಗೆ ಸೇರಿದ್ದ ಮನೆಯಲ್ಲೇ ಬಾಡಿಗೆಗೆ ಇದ್ದ ಆರೋಪಿ ಅರವಿಂದ್ ಕೃತ್ಯ ಎಸಗಿದ್ದ’ ಎಂದೂ ತಿಳಿಸಿದರು.</p>.<p><strong>ಬಟ್ಟೆ ವ್ಯಾಪಾರದಲ್ಲಿ ನಷ್ಟ:</strong> ‘ಆರೋಪಿ, ಸಾಲ ಮಾಡಿ ಬಟ್ಟೆ ವ್ಯಾಪಾರ ಆರಂಭಿಸಿದ್ದ. ಅದರಲ್ಲಿ ನಷ್ಟ ಅನುಭವಿಸಿದ್ದ ಕಾರಣಕ್ಕೆ ಕೃತ್ಯಕ್ಕೆ ಸಂಚು ರೂಪಿಸಿದ್ದ’ ಎಂದಿದ್ದಾರೆ.</p>.<p>ಕೃತ್ಯ ನಡೆದ ದಿನ ಪೊಲೀಸರ ತಂಡ ಮನೆಗೆ ಹೋದಾಗಲೂ ಆರೋಪಿ ಸ್ಥಳದಲ್ಲಿದ್ದ. ತನಗೇನು ಗೊತ್ತಿಲ್ಲದಂತೆ ನಟಿಸಿದ್ದ. ಆರೋಪಿಗಳು ಜಯಶ್ರೀ ಅವರನ್ನು ಹಿಂದಿನಿಂದ ಹಿಡಿದುಕೊಂಡು ಕಟ್ಟಿಹಾಕಿದ್ದರು. ಅವರೂ ಆರೋಪಿಗಳನ್ನು ನೋಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>