‘ಬಸವೇಶ್ವರನಗರ ಠಾಣೆ ರೌಡಿ ಪಟ್ಟಿಯಲ್ಲಿ ಹರೀಶ್ ಹೆಸರಿತ್ತು. ತನ್ನದೇ ತಂಡ ಕಟ್ಟಿಕೊಂಡು ಬಾಣಸವಾಡಿ, ಹೆಣ್ಣೂರು ಹಾಗೂ ಸುತ್ತಮುತ್ತ ಅಪರಾಧ ಕೃತ್ಯ ಎಸಗುತ್ತಿದ್ದ. 2017ರಲ್ಲಿ ರಕ್ಷಿತ್ ಮೇಲೆ ಹಲ್ಲೆ ಮಾಡಿದ್ದ ಆತ, ಬಲ ಕಿವಿ ಕತ್ತರಿಸಿದ್ದ. ಜೊತೆಗೆ, ಆತನ ಅಣ್ಣನಿಗೂ ಜೀವ ಬೆದರಿಕೆ ಹಾಕಿದ್ದ. ಅದರಿಂದ ಕೋಪಗೊಂಡಿದ್ದ ರಕ್ಷಿತ್, ಸಹಚರರ ಜೊತೆ ಸೇರಿ ಹರೀಶ್ನನ್ನು ಹತ್ಯೆ ಮಾಡಿ ಸೇಡು ತೀರಿಸಿಕೊಂಡಿದ್ದಾನೆ. ಈ ಬಗ್ಗೆ ಆತನೇ ಹೇಳಿಕೆ ನೀಡಿದ್ದಾನೆ’ ಎಂದೂ ತಿಳಿಸಿದರು.