<p>ಬೆಂಗಳೂರು: ಠಾಣೆಯಿಂದ ಹೊರಬಂದ ರೌಡಿಯನ್ನು ಹಿಂಬಾಲಿಸಿ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಬಾಣಸವಾಡಿ ಠಾಣೆಯ ಬಳಿ ಬುಧವಾರ ನಡೆದಿದೆ.</p>.<p>ಬಸವೇಶ್ವರನಗರದಲ್ಲಿ ವಾಸವಿದ್ದ ಹರೀಶ್ ಕೊಲೆಯಾದ ರೌಡಿ.</p>.<p>ಕೊಲೆ, ಕೊಲೆ ಯತ್ನ ಸೇರಿದಂತೆ ನಾಲ್ಕು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹರೀಶ್ ವಿರುದ್ಧಬಾಣಸವಾಡಿ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿತ್ತು. ಇದಾದ ಬಳಿಕ ಹರೀಶ್ ಬಸವೇಶ್ವರನಗರ ವ್ಯಾಪ್ತಿಯಲ್ಲಿ ವಾಸವಿದ್ದ.</p>.<p>‘ಹರೀಶ್ ಅಪರಾಧ ಕೃತ್ಯಗಳಲ್ಲಿ ಮುಂದುವರಿದಿರುವ ಕುರಿತು ಪೊಲೀಸರಿಗೆ ಮಾಹಿತಿ ಸಿಕ್ಕಿದ್ದರಿಂದ ಠಾಣೆಗೆ ಬರುವಂತೆ ಸೂಚಿಸಿದ್ದರು. ಹರೀಶ್ಗೆ ಇನ್ನು ಮುಂದೆ ಅಪರಾಧಗಳಲ್ಲಿ ತೊಡಗದಂತೆ ಎಚ್ಚರಿಸಿ, ಮುಚ್ಚಳಿಕೆ ಬರೆಸಿ ಕಳುಹಿಸಿದ್ದರು’.</p>.<p>‘ಠಾಣೆಯಿಂದ ಹೊರಬಂದಿದ್ದ ಹರೀಶ್ನನ್ನು ದುಷ್ಕರ್ಮಿಗಳ ತಂಡ ಹಿಂಬಾಲಿಸಿತ್ತು. ಠಾಣೆಯಿಂದ ಕೆಲವೇ ದೂರದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಈ ವೇಳೆ ನೆಲಕ್ಕೆ ಬಿದ್ದ ಆತನ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ, ಹರೀಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಘಟನೆ ಸಂಬಂಧ ಅಕ್ಕಪಕ್ಕದ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಹಳೆಯ ದ್ವೇಷದಿಂದ ಹರೀಶ್ ಮೇಲೆ ದಾಳಿ ನಡೆಸಿರುವ ಶಂಕೆ ಇದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಠಾಣೆಯಿಂದ ಹೊರಬಂದ ರೌಡಿಯನ್ನು ಹಿಂಬಾಲಿಸಿ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಬಾಣಸವಾಡಿ ಠಾಣೆಯ ಬಳಿ ಬುಧವಾರ ನಡೆದಿದೆ.</p>.<p>ಬಸವೇಶ್ವರನಗರದಲ್ಲಿ ವಾಸವಿದ್ದ ಹರೀಶ್ ಕೊಲೆಯಾದ ರೌಡಿ.</p>.<p>ಕೊಲೆ, ಕೊಲೆ ಯತ್ನ ಸೇರಿದಂತೆ ನಾಲ್ಕು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹರೀಶ್ ವಿರುದ್ಧಬಾಣಸವಾಡಿ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿತ್ತು. ಇದಾದ ಬಳಿಕ ಹರೀಶ್ ಬಸವೇಶ್ವರನಗರ ವ್ಯಾಪ್ತಿಯಲ್ಲಿ ವಾಸವಿದ್ದ.</p>.<p>‘ಹರೀಶ್ ಅಪರಾಧ ಕೃತ್ಯಗಳಲ್ಲಿ ಮುಂದುವರಿದಿರುವ ಕುರಿತು ಪೊಲೀಸರಿಗೆ ಮಾಹಿತಿ ಸಿಕ್ಕಿದ್ದರಿಂದ ಠಾಣೆಗೆ ಬರುವಂತೆ ಸೂಚಿಸಿದ್ದರು. ಹರೀಶ್ಗೆ ಇನ್ನು ಮುಂದೆ ಅಪರಾಧಗಳಲ್ಲಿ ತೊಡಗದಂತೆ ಎಚ್ಚರಿಸಿ, ಮುಚ್ಚಳಿಕೆ ಬರೆಸಿ ಕಳುಹಿಸಿದ್ದರು’.</p>.<p>‘ಠಾಣೆಯಿಂದ ಹೊರಬಂದಿದ್ದ ಹರೀಶ್ನನ್ನು ದುಷ್ಕರ್ಮಿಗಳ ತಂಡ ಹಿಂಬಾಲಿಸಿತ್ತು. ಠಾಣೆಯಿಂದ ಕೆಲವೇ ದೂರದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಈ ವೇಳೆ ನೆಲಕ್ಕೆ ಬಿದ್ದ ಆತನ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ, ಹರೀಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಘಟನೆ ಸಂಬಂಧ ಅಕ್ಕಪಕ್ಕದ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಹಳೆಯ ದ್ವೇಷದಿಂದ ಹರೀಶ್ ಮೇಲೆ ದಾಳಿ ನಡೆಸಿರುವ ಶಂಕೆ ಇದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>