<p><strong>ಬೆಂಗಳೂರು:</strong> ಎಚ್ಬಿಆರ್ ಲೇಔಟ್ ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಸೈಯದ್ ಜುಬೇರ್ ಎಂಬುವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.</p>.<p>ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿರುವ ಜುಬೇರ್ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>‘ಫೈನಾನ್ಶಿಯರ್ ಆಗಿರುವ ಜುಬೇರ್ ಶುಕ್ರವಾರ ರಾತ್ರಿ ಹೊರವರ್ತುಲ ರಸ್ತೆಯಲ್ಲಿ ಹೊರಟಿದ್ದರು. ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳಿಬ್ಬರ ಪೈಕಿ ಒಬ್ಬಾತ, ಪಿಸ್ತೂಲ್ನಿಂದ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದ. ರಸ್ತೆಯಲ್ಲೇ ನರಳುತ್ತ ಬಿದ್ದಿದ್ದ<br />ಜುಬೇರ್ ಅವರನ್ನು ಸ್ಥಳೀಯರೇ ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದು ಕೆ.ಜಿ.ಹಳ್ಳಿ ಪೊಲೀಸರು ಹೇಳಿದರು.</p>.<p>‘ಹೆಲ್ಮೆಟ್ ಧರಿಸಿಕೊಂಡು ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಹಣಕಾಸಿನ ವ್ಯವಹಾರ ಹಾಗೂ ಹಳೇ ವೈಷಮ್ಯದಿಂದ ಈ ಘಟನೆ ನಡೆದಿರುವ ಅನುಮಾನವಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಚ್ಬಿಆರ್ ಲೇಔಟ್ ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಸೈಯದ್ ಜುಬೇರ್ ಎಂಬುವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.</p>.<p>ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿರುವ ಜುಬೇರ್ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>‘ಫೈನಾನ್ಶಿಯರ್ ಆಗಿರುವ ಜುಬೇರ್ ಶುಕ್ರವಾರ ರಾತ್ರಿ ಹೊರವರ್ತುಲ ರಸ್ತೆಯಲ್ಲಿ ಹೊರಟಿದ್ದರು. ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳಿಬ್ಬರ ಪೈಕಿ ಒಬ್ಬಾತ, ಪಿಸ್ತೂಲ್ನಿಂದ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದ. ರಸ್ತೆಯಲ್ಲೇ ನರಳುತ್ತ ಬಿದ್ದಿದ್ದ<br />ಜುಬೇರ್ ಅವರನ್ನು ಸ್ಥಳೀಯರೇ ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದು ಕೆ.ಜಿ.ಹಳ್ಳಿ ಪೊಲೀಸರು ಹೇಳಿದರು.</p>.<p>‘ಹೆಲ್ಮೆಟ್ ಧರಿಸಿಕೊಂಡು ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಹಣಕಾಸಿನ ವ್ಯವಹಾರ ಹಾಗೂ ಹಳೇ ವೈಷಮ್ಯದಿಂದ ಈ ಘಟನೆ ನಡೆದಿರುವ ಅನುಮಾನವಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>