ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಸರ, ಬೈಕ್ ಕಳವು ಆರೋಪಿಗಳ ಬಂಧನ

Last Updated 26 ಡಿಸೆಂಬರ್ 2020, 18:12 IST
ಅಕ್ಷರ ಗಾತ್ರ

ಬೆಂಗಳೂರು: ಸರ ಹಾಗೂ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಪ್ರತ್ಯೇಕ ಪ್ರಕರಣಗಳನ್ನು ಬೇಧಿಸಿರುವ ತಿಲಕನಗರ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಿಲಕ್‌ನಗರ, ಕೋರಮಂಗಲ, ಸುಬ್ರಹ್ಮಣ್ಯನಗರ, ಪುಟ್ಟೇನಹಳ್ಳಿ, ಬಸವನಗುಡಿ ಠಾಣಾ ವ್ಯಾಪ್ತಿಗಳಲ್ಲಿ ಸರಗಳ್ಳತನ ಹಾಗೂ ಮೊಬೈಲ್ ಕದಿಯುತ್ತಿದ್ದ ಸಂಜಯ್‌ (21) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ ₹4.30 ಲಕ್ಷ ಬೆಲೆಬಾಳುವ ನಾಲ್ಕು ಚಿನ್ನದ ಸರಗಳು ಹಾಗೂ ಒಂದು ಬೈಕ್ ಜಪ್ತಿ ಮಾಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ತನ್ನ ಸಹಚರರೊಂದಿಗೆ ಬಂದು ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

19 ಬೈಕ್‌ ವಶ: ತಿಲಕನಗರ ಹಾಗೂ ಮೈಕೊ ಬಡಾವಣೆ ವ್ಯಾಪ್ತಿಗಳಲ್ಲಿ ಬೈಕ್‌ ಕಳವು ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಜಯನಗರದ ಮಗೇಂದ್ರನ್ (20) ಹಾಗೂ ಜರಗನಹಳ್ಳಿಯ ದೀಪಕ್‌ (19) ಬಂಧಿತರು. ಮನೆಗಳ ಮುಂದೆ ನಿಂತಿರುವ ವಾಹನಗಳನ್ನು ರಾತ್ರಿ ವೇಳೆ ಕದಿಯುತ್ತಿದ್ದರು. ಹ್ಯಾಂಡ್‌ಲಾಕ್ ಮುರಿದು ಕಳವು ಮಾಡುವುದರಲ್ಲಿ ಇವರು ನಿಸ್ಸೀಮರಾಗಿದ್ದರು ಎಂದು ಪೊಲೀಸರು ತಿಳಿಸಿದರು.

‘ಮಗೇಂದ್ರನ್ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಜಾಮೀನಿನ ಮೇಲೆ ಹೊರಬಂದಿರುವ ಆರೋಪಿ ದೀಪಕ್‌, ನ್ಯಾಯಾಲಯಕ್ಕೆ ಹಾಜರಾಗದೆ, ತಲೆಮರೆಸಿಕೊಂಡಿದ್ದ. ಆರೋಪಿಗಳಿಂದ ₹20 ಲಕ್ಷ ಬೆಲೆ ಬಾಳುವ 19 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT