<p><strong>ಬೆಂಗಳೂರು</strong>: ಸರ ಹಾಗೂ ಬೈಕ್ಗಳನ್ನು ಕಳವು ಮಾಡುತ್ತಿದ್ದ ಪ್ರತ್ಯೇಕ ಪ್ರಕರಣಗಳನ್ನು ಬೇಧಿಸಿರುವ ತಿಲಕನಗರ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ತಿಲಕ್ನಗರ, ಕೋರಮಂಗಲ, ಸುಬ್ರಹ್ಮಣ್ಯನಗರ, ಪುಟ್ಟೇನಹಳ್ಳಿ, ಬಸವನಗುಡಿ ಠಾಣಾ ವ್ಯಾಪ್ತಿಗಳಲ್ಲಿ ಸರಗಳ್ಳತನ ಹಾಗೂ ಮೊಬೈಲ್ ಕದಿಯುತ್ತಿದ್ದ ಸಂಜಯ್ (21) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿಯಿಂದ ₹4.30 ಲಕ್ಷ ಬೆಲೆಬಾಳುವ ನಾಲ್ಕು ಚಿನ್ನದ ಸರಗಳು ಹಾಗೂ ಒಂದು ಬೈಕ್ ಜಪ್ತಿ ಮಾಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ತನ್ನ ಸಹಚರರೊಂದಿಗೆ ಬಂದು ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p>.<p class="Subhead"><strong>19 ಬೈಕ್ ವಶ: </strong>ತಿಲಕನಗರ ಹಾಗೂ ಮೈಕೊ ಬಡಾವಣೆ ವ್ಯಾಪ್ತಿಗಳಲ್ಲಿ ಬೈಕ್ ಕಳವು ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಜಯನಗರದ ಮಗೇಂದ್ರನ್ (20) ಹಾಗೂ ಜರಗನಹಳ್ಳಿಯ ದೀಪಕ್ (19) ಬಂಧಿತರು. ಮನೆಗಳ ಮುಂದೆ ನಿಂತಿರುವ ವಾಹನಗಳನ್ನು ರಾತ್ರಿ ವೇಳೆ ಕದಿಯುತ್ತಿದ್ದರು. ಹ್ಯಾಂಡ್ಲಾಕ್ ಮುರಿದು ಕಳವು ಮಾಡುವುದರಲ್ಲಿ ಇವರು ನಿಸ್ಸೀಮರಾಗಿದ್ದರು ಎಂದು ಪೊಲೀಸರು ತಿಳಿಸಿದರು.</p>.<p>‘ಮಗೇಂದ್ರನ್ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಜಾಮೀನಿನ ಮೇಲೆ ಹೊರಬಂದಿರುವ ಆರೋಪಿ ದೀಪಕ್, ನ್ಯಾಯಾಲಯಕ್ಕೆ ಹಾಜರಾಗದೆ, ತಲೆಮರೆಸಿಕೊಂಡಿದ್ದ. ಆರೋಪಿಗಳಿಂದ ₹20 ಲಕ್ಷ ಬೆಲೆ ಬಾಳುವ 19 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರ ಹಾಗೂ ಬೈಕ್ಗಳನ್ನು ಕಳವು ಮಾಡುತ್ತಿದ್ದ ಪ್ರತ್ಯೇಕ ಪ್ರಕರಣಗಳನ್ನು ಬೇಧಿಸಿರುವ ತಿಲಕನಗರ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ತಿಲಕ್ನಗರ, ಕೋರಮಂಗಲ, ಸುಬ್ರಹ್ಮಣ್ಯನಗರ, ಪುಟ್ಟೇನಹಳ್ಳಿ, ಬಸವನಗುಡಿ ಠಾಣಾ ವ್ಯಾಪ್ತಿಗಳಲ್ಲಿ ಸರಗಳ್ಳತನ ಹಾಗೂ ಮೊಬೈಲ್ ಕದಿಯುತ್ತಿದ್ದ ಸಂಜಯ್ (21) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿಯಿಂದ ₹4.30 ಲಕ್ಷ ಬೆಲೆಬಾಳುವ ನಾಲ್ಕು ಚಿನ್ನದ ಸರಗಳು ಹಾಗೂ ಒಂದು ಬೈಕ್ ಜಪ್ತಿ ಮಾಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ತನ್ನ ಸಹಚರರೊಂದಿಗೆ ಬಂದು ಚಿನ್ನದ ಸರಗಳನ್ನು ಕಸಿದು ಪರಾರಿಯಾಗುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p>.<p class="Subhead"><strong>19 ಬೈಕ್ ವಶ: </strong>ತಿಲಕನಗರ ಹಾಗೂ ಮೈಕೊ ಬಡಾವಣೆ ವ್ಯಾಪ್ತಿಗಳಲ್ಲಿ ಬೈಕ್ ಕಳವು ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಜಯನಗರದ ಮಗೇಂದ್ರನ್ (20) ಹಾಗೂ ಜರಗನಹಳ್ಳಿಯ ದೀಪಕ್ (19) ಬಂಧಿತರು. ಮನೆಗಳ ಮುಂದೆ ನಿಂತಿರುವ ವಾಹನಗಳನ್ನು ರಾತ್ರಿ ವೇಳೆ ಕದಿಯುತ್ತಿದ್ದರು. ಹ್ಯಾಂಡ್ಲಾಕ್ ಮುರಿದು ಕಳವು ಮಾಡುವುದರಲ್ಲಿ ಇವರು ನಿಸ್ಸೀಮರಾಗಿದ್ದರು ಎಂದು ಪೊಲೀಸರು ತಿಳಿಸಿದರು.</p>.<p>‘ಮಗೇಂದ್ರನ್ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಜಾಮೀನಿನ ಮೇಲೆ ಹೊರಬಂದಿರುವ ಆರೋಪಿ ದೀಪಕ್, ನ್ಯಾಯಾಲಯಕ್ಕೆ ಹಾಜರಾಗದೆ, ತಲೆಮರೆಸಿಕೊಂಡಿದ್ದ. ಆರೋಪಿಗಳಿಂದ ₹20 ಲಕ್ಷ ಬೆಲೆ ಬಾಳುವ 19 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>