<p><strong>ಬೆಂಗಳೂರು</strong>: ಯಲಹಂಕ ಠಾಣೆ ವ್ಯಾಪ್ತಿಯಲ್ಲಿ ಕಾರೊಂದರ ಮಾಲೀಕರನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಹೊಸಕೋಟೆ ಬೂದಿಗೆರೆಯ ಅಸ್ಲಂ ಪಾಷಾ (32) ಹಾಗೂ ಕೆ.ಜಿ.ಹಳ್ಳಿ ವೆಂಕಟೇಶಪುರದ ಸೈಯದ್ ಇಮ್ರಾನ್ (25) ಬಂಧಿತರು’ ಎಂದು ಪೊಲೀಸರು ಹೇಳಿದರು.</p>.<p>‘ಅಪರಾಧ ಹಿನ್ನೆಲೆಯುಳ್ಳ ಆರೋಪಿಗಳು, ನಗರದಲ್ಲಿ ಸುತ್ತಾಡಿ ಸುಲಿಗೆ ಮಾಡುತ್ತಿದ್ದರು. ಸಂಪಿಗೆಹಳ್ಳಿ, ಹೆಣ್ಣೂರು, ಕೊತ್ತನೂರು, ಸೋಲದೇವನಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಬಾಗಲೂರು ಠಾಣೆಗಳ ವ್ಯಾಪ್ತಿಗಳಲ್ಲೂ ಆರೋಪಿಗಳು ಕೃತ್ಯ ಎಸಗಿರುವ ಮಾಹಿತಿ ಇದೆ’ ಎಂದೂ ತಿಳಿಸಿದರು.</p>.<p>‘ದೂರುದಾರ ಕೆ.ವಿಜೀಶ್, ಚಾಲಕ, ಸ್ನೇಹಿತರ ಜೊತೆ ಏಪ್ರಿಲ್ 9ರಂದು ಫಾರ್ಚೂನರ್ ಕಾರಿನಲ್ಲಿ ಬಾಗಲೂರು ವೃತ್ತದಿಂದ ರೇವಾ ಕಾಲೇಜು ಕಡೆ ಹೊರಟಿದ್ದರು. ಅದೇ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಆರೋಪಿಗಳು ಕಾರು ಅಡ್ಡಗಟ್ಟಿದ್ದರು.’</p>.<p>‘ಕಾರಿನ ಬಲಭಾಗದ ಬಾಗಿಲಿನ ಗಾಜನ್ನು ಆರೋಪಿಗಳು ಒಡೆದಿದ್ದರು. ನಂತರ, ಚಾಕು ತೋರಿಸಿ ಬೆದರಿಸಿದ್ದರು. ದೂರುದಾರರ ಮೊಬೈಲ್, ₹ 5,000 ನಗದು ಕಿತ್ತುಕೊಂಡು ಪರಾರಿಯಾಗಿದ್ದರು’ ಎಂದರು.</p>.<p>‘ಘಟನೆ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ, ತನಿಖೆ ನಡೆಸಿದ್ದ ವಿಶೇಷ ತಂಡ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯಲಹಂಕ ಠಾಣೆ ವ್ಯಾಪ್ತಿಯಲ್ಲಿ ಕಾರೊಂದರ ಮಾಲೀಕರನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಹೊಸಕೋಟೆ ಬೂದಿಗೆರೆಯ ಅಸ್ಲಂ ಪಾಷಾ (32) ಹಾಗೂ ಕೆ.ಜಿ.ಹಳ್ಳಿ ವೆಂಕಟೇಶಪುರದ ಸೈಯದ್ ಇಮ್ರಾನ್ (25) ಬಂಧಿತರು’ ಎಂದು ಪೊಲೀಸರು ಹೇಳಿದರು.</p>.<p>‘ಅಪರಾಧ ಹಿನ್ನೆಲೆಯುಳ್ಳ ಆರೋಪಿಗಳು, ನಗರದಲ್ಲಿ ಸುತ್ತಾಡಿ ಸುಲಿಗೆ ಮಾಡುತ್ತಿದ್ದರು. ಸಂಪಿಗೆಹಳ್ಳಿ, ಹೆಣ್ಣೂರು, ಕೊತ್ತನೂರು, ಸೋಲದೇವನಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಬಾಗಲೂರು ಠಾಣೆಗಳ ವ್ಯಾಪ್ತಿಗಳಲ್ಲೂ ಆರೋಪಿಗಳು ಕೃತ್ಯ ಎಸಗಿರುವ ಮಾಹಿತಿ ಇದೆ’ ಎಂದೂ ತಿಳಿಸಿದರು.</p>.<p>‘ದೂರುದಾರ ಕೆ.ವಿಜೀಶ್, ಚಾಲಕ, ಸ್ನೇಹಿತರ ಜೊತೆ ಏಪ್ರಿಲ್ 9ರಂದು ಫಾರ್ಚೂನರ್ ಕಾರಿನಲ್ಲಿ ಬಾಗಲೂರು ವೃತ್ತದಿಂದ ರೇವಾ ಕಾಲೇಜು ಕಡೆ ಹೊರಟಿದ್ದರು. ಅದೇ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಆರೋಪಿಗಳು ಕಾರು ಅಡ್ಡಗಟ್ಟಿದ್ದರು.’</p>.<p>‘ಕಾರಿನ ಬಲಭಾಗದ ಬಾಗಿಲಿನ ಗಾಜನ್ನು ಆರೋಪಿಗಳು ಒಡೆದಿದ್ದರು. ನಂತರ, ಚಾಕು ತೋರಿಸಿ ಬೆದರಿಸಿದ್ದರು. ದೂರುದಾರರ ಮೊಬೈಲ್, ₹ 5,000 ನಗದು ಕಿತ್ತುಕೊಂಡು ಪರಾರಿಯಾಗಿದ್ದರು’ ಎಂದರು.</p>.<p>‘ಘಟನೆ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ, ತನಿಖೆ ನಡೆಸಿದ್ದ ವಿಶೇಷ ತಂಡ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>