ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂಚನೆ: ಯುವರಾಜ್ ಕಾರುಗಳ ಜಪ್ತಿ ಮಾಡಿದ ಸಿಸಿಬಿ

Last Updated 7 ಜನವರಿ 2021, 18:33 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ನಾಯಕರು ಹಾಗೂ ಆರ್‌ಎಸ್‌ಎಸ್‌ ಮುಖಂಡರ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿ ಯುವರಾಜ್ (ಸ್ವಾಮಿ) ಬಳಸುತ್ತಿದ್ದ ಎರಡು ಐಷಾರಾಮಿ ಕಾರುಗಳನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಯುವರಾಜ್‌ ಬಳಸುತ್ತಿದ್ದ ಬೆಂಜ್ ಕಾರು ಹಾಗೂ ರೇಂಜ್‌ ರೋವರ್‌ ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಿ, ಸಿಸಿಬಿ ಕಚೇರಿ ಬಳಿ ನಿಲ್ಲಿಸಲಾಗಿದೆ. ಇದರಲ್ಲಿ ಒಂದು ಕಾರು ರಾಜಕಾರಣಿಯೊಬ್ಬರಿಂದ ಪಡೆದಿರುವುದು ಎಂದು ಮೂಲಗಳು ತಿಳಿಸಿವೆ.

ಹಿರಿಯ ರಾಜಕಾರಣಿಗಳು ತನ್ನ ಆಪ್ತರೆಂದು ಹೇಳಿಕೊಂಡಿದ್ದ ಯುವರಾಜ್, ದೊಡ್ಡ ಹುದ್ದೆಗಳನ್ನು ಕೊಡಿಸವುದಾಗಿ ಹಲವರಿಂದ ಹಣ ಪಡೆದು, ವಂಚಿಸಿರುವ ಆರೋಪದಡಿ ಇತ್ತೀಚೆಗಷ್ಟೇ ಸಿಸಿಬಿ ಪೊಲೀಸರು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT