ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

28 ಕೈಗಾರಿಕೆಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

ವೃಷಭಾವತಿ ಮಾಲಿನ್ಯ: ಹೈಕೋರ್ಟ್‌ಗೆ ಮಾಹಿತಿ ಸಲ್ಲಿಕೆ
Last Updated 20 ನವೆಂಬರ್ 2020, 20:44 IST
ಅಕ್ಷರ ಗಾತ್ರ

ಬೆಂಗಳೂರು: ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಿಸದೇ ವೃಷಭಾವತಿ ನದಿಯ ಮಾಲಿನ್ಯಕ್ಕೆ ಕಾರಣವಾಗಿದ್ದ 28 ಕೈಗಾರಿಕೆಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು (ಕೆಎಸ್‌ಪಿಸಿಬಿ) ಹೈಕೋರ್ಟ್‌ಗೆ ಮಾಹಿತಿ ಸಲ್ಲಿಸಿದೆ.

ವೃಷಭಾವತಿ ಪುನಶ್ಚೇತನ ಯೋಜನೆ ಮತ್ತು ನದಿಯ ಹರಿವು ತಿರುಗಿಸುವ ಪ್ರಸ್ತಾವ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಕೆಎಸ್‌ಪಿಸಿಬಿ ವಕೀಲರು ಶುಕ್ರವಾರ ಈ ಮಾಹಿತಿ ಒದಗಿಸಿದರು.

ನದಿಗೆ ತ್ಯಾಜ್ಯ ಹರಿಸುತ್ತಿದ್ದ 59 ಕೈಗಾರಿಕೆಗಳು ಸ್ವಯಂಪ್ರೇರಿತವಾಗಿ ಮುಚ್ಚಿವೆ. 22 ಕೈಗಾರಿಕೆಗಳಿಗೆ ಬೆಸ್ಕಾಂ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದೆ. 28 ಕೈಗಾರಿಕೆಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ. ಕೈಗಾರಿಕೆಗಳನ್ನು ಮುಚ್ಚುವಂತೆ ನೀಡಿರುವ ನಿರ್ದೇಶನವನ್ನು ಹಿಂಪಡೆಯುವಂತೆ ಕೋರಿ ನಾಲ್ಕು ಅರ್ಜಿಗಳು ಬಂದಿವೆ ಎಂದು ತಿಳಿಸಿದರು.

ವೃಷಭಾವತಿ ಪುನಶ್ಚೇತನ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾಡಿಕೊಂಡಿರುವ ಒಪ್ಪಂದವನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಸೂಚಿಸಿದ ವಿಭಾಗೀಯ ಪೀಠ, ಡಿಸೆಂಬರ್‌ 3ಕ್ಕೆ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT