<p>ಬೆಂಗಳೂರು: ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಿಸದೇ ವೃಷಭಾವತಿ ನದಿಯ ಮಾಲಿನ್ಯಕ್ಕೆ ಕಾರಣವಾಗಿದ್ದ 28 ಕೈಗಾರಿಕೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು (ಕೆಎಸ್ಪಿಸಿಬಿ) ಹೈಕೋರ್ಟ್ಗೆ ಮಾಹಿತಿ ಸಲ್ಲಿಸಿದೆ.</p>.<p>ವೃಷಭಾವತಿ ಪುನಶ್ಚೇತನ ಯೋಜನೆ ಮತ್ತು ನದಿಯ ಹರಿವು ತಿರುಗಿಸುವ ಪ್ರಸ್ತಾವ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಕೆಎಸ್ಪಿಸಿಬಿ ವಕೀಲರು ಶುಕ್ರವಾರ ಈ ಮಾಹಿತಿ ಒದಗಿಸಿದರು.</p>.<p>ನದಿಗೆ ತ್ಯಾಜ್ಯ ಹರಿಸುತ್ತಿದ್ದ 59 ಕೈಗಾರಿಕೆಗಳು ಸ್ವಯಂಪ್ರೇರಿತವಾಗಿ ಮುಚ್ಚಿವೆ. 22 ಕೈಗಾರಿಕೆಗಳಿಗೆ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ. 28 ಕೈಗಾರಿಕೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಕೈಗಾರಿಕೆಗಳನ್ನು ಮುಚ್ಚುವಂತೆ ನೀಡಿರುವ ನಿರ್ದೇಶನವನ್ನು ಹಿಂಪಡೆಯುವಂತೆ ಕೋರಿ ನಾಲ್ಕು ಅರ್ಜಿಗಳು ಬಂದಿವೆ ಎಂದು ತಿಳಿಸಿದರು.</p>.<p>ವೃಷಭಾವತಿ ಪುನಶ್ಚೇತನ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾಡಿಕೊಂಡಿರುವ ಒಪ್ಪಂದವನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೂಚಿಸಿದ ವಿಭಾಗೀಯ ಪೀಠ, ಡಿಸೆಂಬರ್ 3ಕ್ಕೆ ವಿಚಾರಣೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಿಸದೇ ವೃಷಭಾವತಿ ನದಿಯ ಮಾಲಿನ್ಯಕ್ಕೆ ಕಾರಣವಾಗಿದ್ದ 28 ಕೈಗಾರಿಕೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು (ಕೆಎಸ್ಪಿಸಿಬಿ) ಹೈಕೋರ್ಟ್ಗೆ ಮಾಹಿತಿ ಸಲ್ಲಿಸಿದೆ.</p>.<p>ವೃಷಭಾವತಿ ಪುನಶ್ಚೇತನ ಯೋಜನೆ ಮತ್ತು ನದಿಯ ಹರಿವು ತಿರುಗಿಸುವ ಪ್ರಸ್ತಾವ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಕೆಎಸ್ಪಿಸಿಬಿ ವಕೀಲರು ಶುಕ್ರವಾರ ಈ ಮಾಹಿತಿ ಒದಗಿಸಿದರು.</p>.<p>ನದಿಗೆ ತ್ಯಾಜ್ಯ ಹರಿಸುತ್ತಿದ್ದ 59 ಕೈಗಾರಿಕೆಗಳು ಸ್ವಯಂಪ್ರೇರಿತವಾಗಿ ಮುಚ್ಚಿವೆ. 22 ಕೈಗಾರಿಕೆಗಳಿಗೆ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ. 28 ಕೈಗಾರಿಕೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಕೈಗಾರಿಕೆಗಳನ್ನು ಮುಚ್ಚುವಂತೆ ನೀಡಿರುವ ನಿರ್ದೇಶನವನ್ನು ಹಿಂಪಡೆಯುವಂತೆ ಕೋರಿ ನಾಲ್ಕು ಅರ್ಜಿಗಳು ಬಂದಿವೆ ಎಂದು ತಿಳಿಸಿದರು.</p>.<p>ವೃಷಭಾವತಿ ಪುನಶ್ಚೇತನ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾಡಿಕೊಂಡಿರುವ ಒಪ್ಪಂದವನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೂಚಿಸಿದ ವಿಭಾಗೀಯ ಪೀಠ, ಡಿಸೆಂಬರ್ 3ಕ್ಕೆ ವಿಚಾರಣೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>