‘ವಂಚನೆ, ಕಳವು, ಸುಲಿಗೆ ಮತ್ತು ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆ ಪೊಲೀಸರು ದಾಖಲಿಸಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಕೊಲ್ಕತ್ತದ ತಾಯಿ ಮತ್ತು ಮಗಳ ಪರವಾಗಿ ಜಿಪಿಎ ಹಕ್ಕುದಾರರ ಮೂಲಕ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಈ ಅರ್ಜಿ ವಿಚಾರಣೆಯ ಮಾನ್ಯತೆ ಹೊಂದಿಲ್ಲ’ ಎಂದು ವಜಾಗೊಳಿಸಿದೆ.