ಬೆಂಗಳೂರು: ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಡಿ. 31ರರಾತ್ರಿ ಯಾರಾದರೂ ಮದ್ಯ ಕುಡಿದು ವಾಹನ ಚಲಾಯಿಸಿದರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಪೊಲೀಸರು ತೀರ್ಮಾನಿಸಿದ್ದಾರೆ.
ಶನಿವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿರುವ ನಗರ ಸಂಚಾರ ವಿಭಾಗದ ಜಂಟಿ ಕಮಿಷನರ್ ರವಿಕಾಂತೇಗೌಡ, 'ಅಂದು ಕುಡಿದು ವಾಹನ ಚಲಾಯಿಸಬೇಡಿ.ಚಲಾಯಿಸಿ ಸಿಕ್ಕಿಬಿದ್ದರೆ ನಿರ್ಲಕ್ಷ್ಯ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು' ಎಂದರು.
'ಹೊಸ ವರ್ಷಾಚರಣೆಗೆ ಈ ಬಾರಿ 175 ಸ್ಥಳಗಳಲ್ಲಿ ಮದ್ಯ ತಪಾಸಣೆ ನಡೆಸಲಾಗುವುದು' ಎಂದರು. ಅಂದು ಬಾರ್ ಆ್ಯಂಡ್ ರೆಸ್ಟೊರೆಂಟ್ಗಳು 2 ಗಂಟೆವರೆಗೆ ತೆರೆದಿರಲಿವೆ.