<p><strong>ಬೆಂಗಳೂರು:</strong> ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಒಟ್ಟು ಶೇ 62.34 ಫಲಿತಾಂಶ ಬಂದಿದ್ದರೆ, ಸಮಾಜ ಕಲ್ಯಾಣ ಇಲಾಖೆಯಡಿ ಇರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳು ಶೇ 91 ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿವೆ. </p>.<p>ಸರ್ಕಾರದ ಇತರೆ ಶಾಲೆಗಳು ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಿಗಿಂತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮಕ್ಕಳು ಫಲಿತಾಂಶವಾರು ಶೇ 28ರಷ್ಟು ಅಧಿಕ ಸಾಧನೆ ಮಾಡಿದ್ದಾರೆ.</p>.<p>ಕ್ರೈಸ್ ಎಂಬುದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವಾಗಿದ್ದು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತವಾಗಿ ವಸತಿ ಶಿಕ್ಷಣವನ್ನು ನೀಡುವ ಸಂಸ್ಥೆ.</p>.<p>ಅಲೆಮಾರಿಗಳು, ಪೌರಕಾರ್ಮಿಕರು, ಮಾಜಿ ದೇವದಾಸಿಯರ ಮಕ್ಕಳು, ಜೀತ ಮುಕ್ತ ಮಕ್ಕಳು, ಅಂಗವಿಕಲರು, ಸ್ಮಶಾನ ಕಾರ್ಮಿಕರ ಮಕ್ಕಳು, ಏಕ ಪೋಷಕರ, ಚಿಂದಿ ಆಯುವವರ ಮಕ್ಕಳಿಗೆ ಯಾವುದೇ ಪ್ರವೇಶ ಪರೀಕ್ಷೆ ಇಲ್ಲದೇ ನೇರವಾಗಿ ಶಾಲಾ ದಾಖಲಾತಿಯನ್ನು ಕ್ರೈಸ್ನಲ್ಲಿ ನೀಡಲಾಗುತ್ತದೆ. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಗೆ 34,984 ವಿದ್ಯಾರ್ಥಿಗಳು ಹಾಜರಾಗಿದ್ದು, 31,726 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 34.10ರಷ್ಟು ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಶೇ 55.90 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕ್ರೈಸ್ ಕಾರ್ಯ ನಿರ್ವಾಹಕ ನಿರ್ದೇಶಕ ಕಾಂತರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಒಟ್ಟು ಶೇ 62.34 ಫಲಿತಾಂಶ ಬಂದಿದ್ದರೆ, ಸಮಾಜ ಕಲ್ಯಾಣ ಇಲಾಖೆಯಡಿ ಇರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳು ಶೇ 91 ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿವೆ. </p>.<p>ಸರ್ಕಾರದ ಇತರೆ ಶಾಲೆಗಳು ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಿಗಿಂತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮಕ್ಕಳು ಫಲಿತಾಂಶವಾರು ಶೇ 28ರಷ್ಟು ಅಧಿಕ ಸಾಧನೆ ಮಾಡಿದ್ದಾರೆ.</p>.<p>ಕ್ರೈಸ್ ಎಂಬುದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವಾಗಿದ್ದು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತವಾಗಿ ವಸತಿ ಶಿಕ್ಷಣವನ್ನು ನೀಡುವ ಸಂಸ್ಥೆ.</p>.<p>ಅಲೆಮಾರಿಗಳು, ಪೌರಕಾರ್ಮಿಕರು, ಮಾಜಿ ದೇವದಾಸಿಯರ ಮಕ್ಕಳು, ಜೀತ ಮುಕ್ತ ಮಕ್ಕಳು, ಅಂಗವಿಕಲರು, ಸ್ಮಶಾನ ಕಾರ್ಮಿಕರ ಮಕ್ಕಳು, ಏಕ ಪೋಷಕರ, ಚಿಂದಿ ಆಯುವವರ ಮಕ್ಕಳಿಗೆ ಯಾವುದೇ ಪ್ರವೇಶ ಪರೀಕ್ಷೆ ಇಲ್ಲದೇ ನೇರವಾಗಿ ಶಾಲಾ ದಾಖಲಾತಿಯನ್ನು ಕ್ರೈಸ್ನಲ್ಲಿ ನೀಡಲಾಗುತ್ತದೆ. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಗೆ 34,984 ವಿದ್ಯಾರ್ಥಿಗಳು ಹಾಜರಾಗಿದ್ದು, 31,726 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 34.10ರಷ್ಟು ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಶೇ 55.90 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕ್ರೈಸ್ ಕಾರ್ಯ ನಿರ್ವಾಹಕ ನಿರ್ದೇಶಕ ಕಾಂತರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>