<p>ಬೆಂಗಳೂರು: ‘ಪೌರತ್ವ ತಿದ್ದುಪಡಿ ಮಸೂದೆಯು ದೇಶವನ್ನು ಧರ್ಮದ ಆಧಾರದಲ್ಲಿ ವಿಭಜಿಸಲು ಹೊಡೆಯುತ್ತಿರುವ ಅಂತಿಮ ಮೊಳೆ’ ಎಂದು ಹಿರಿಯ ವಕೀಲಪ್ರೊ.ರವಿವರ್ಮ ಕುಮಾರ್ ಆತಂಕ ವ್ಯಕ್ತಪಡಿಸಿದರು.</p>.<p>ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವ ಸಂಘಟನೆ (ಎಐಡಿವೈಒ) ನಗರದಲ್ಲಿ ಗುರುವಾರ ಆಯೋಜಿಸಿದ್ದ ‘2019ರ ಆರ್ಥಿಕ ಬಿಕ್ಕಟ್ಟು- ಯುವಜನ’ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಧರ್ಮದ ಆಧಾರದಲ್ಲಿ ರೂಪಿಸಿರುವ ಈ ಮಸೂದೆಯು ಸಂವಿಧಾನ ವಿರೋಧಿಯಾಗಿದೆ. ದೇಶದ ಭದ್ರತೆ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಛಿದ್ರ ಮಾಡಲಿದೆ. ಮುಸ್ಲಿಮರು ಮಾತ್ರ ಇದರಿಂದ ಅನ್ಯಾಯಕ್ಕೆ ಒಳಗಾಗಲಿದ್ದಾರೆ ಎಂದು ಭಾವಿಸಿಕೊಂಡು ಬೇರೆಯವರು ಸುಮ್ಮನಿದ್ದರೆ ಮುಂದೆ ಎಲ್ಲರೂ ತೊಂದರೆಗೆ ಸಿಲುಕುವುದು ಗ್ಯಾರಂಟಿ. ಹೀಗಾಗಿ, ಈಗಲೇ ಎಚ್ಚೆತ್ತುಕೊಳ್ಳಬೇಕು’ ಎಂದರು.</p>.<p>‘ಕೈಗಾರಿಕೆಗಳು ಮತ್ತು ಶಾಲೆಗಳ ಬದಲಿಗೆ ಬೀದಿಗೊಂದು ಪೂಜಾ ಮಂದಿರಗಳು ನಿರ್ಮಾಣವಾಗುತ್ತಿವೆ. ನಿರುದ್ಯೋಗದ ವಿರುದ್ಧ ಚಳವಳಿ ಬಲಿಷ್ಠವಾಗಿ ನಡೆಯಬೇಕಿದ್ದು, ಜೈಲಿಗೆ ಹೋಗಲು ಯುವಜನರು ಸಜ್ಜಾಗಬೇಕು’ ಎಂದು ತಿಳಿಸಿದರು.</p>.<p>‘ಹೈದರಾಬಾದ್ನಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿರುವುದು ಅಪಾಯಕಾರಿ ಬೆಳವಣಿಗೆ. ಪೊಲೀಸರೇ ಶಿಕ್ಷೆ ಕೊಡುವುದಾದರೆ ನ್ಯಾಯಾಂಗದ ಕೆಲಸ ಏನು’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಪೌರತ್ವ ತಿದ್ದುಪಡಿ ಮಸೂದೆಯು ದೇಶವನ್ನು ಧರ್ಮದ ಆಧಾರದಲ್ಲಿ ವಿಭಜಿಸಲು ಹೊಡೆಯುತ್ತಿರುವ ಅಂತಿಮ ಮೊಳೆ’ ಎಂದು ಹಿರಿಯ ವಕೀಲಪ್ರೊ.ರವಿವರ್ಮ ಕುಮಾರ್ ಆತಂಕ ವ್ಯಕ್ತಪಡಿಸಿದರು.</p>.<p>ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವ ಸಂಘಟನೆ (ಎಐಡಿವೈಒ) ನಗರದಲ್ಲಿ ಗುರುವಾರ ಆಯೋಜಿಸಿದ್ದ ‘2019ರ ಆರ್ಥಿಕ ಬಿಕ್ಕಟ್ಟು- ಯುವಜನ’ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಧರ್ಮದ ಆಧಾರದಲ್ಲಿ ರೂಪಿಸಿರುವ ಈ ಮಸೂದೆಯು ಸಂವಿಧಾನ ವಿರೋಧಿಯಾಗಿದೆ. ದೇಶದ ಭದ್ರತೆ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಛಿದ್ರ ಮಾಡಲಿದೆ. ಮುಸ್ಲಿಮರು ಮಾತ್ರ ಇದರಿಂದ ಅನ್ಯಾಯಕ್ಕೆ ಒಳಗಾಗಲಿದ್ದಾರೆ ಎಂದು ಭಾವಿಸಿಕೊಂಡು ಬೇರೆಯವರು ಸುಮ್ಮನಿದ್ದರೆ ಮುಂದೆ ಎಲ್ಲರೂ ತೊಂದರೆಗೆ ಸಿಲುಕುವುದು ಗ್ಯಾರಂಟಿ. ಹೀಗಾಗಿ, ಈಗಲೇ ಎಚ್ಚೆತ್ತುಕೊಳ್ಳಬೇಕು’ ಎಂದರು.</p>.<p>‘ಕೈಗಾರಿಕೆಗಳು ಮತ್ತು ಶಾಲೆಗಳ ಬದಲಿಗೆ ಬೀದಿಗೊಂದು ಪೂಜಾ ಮಂದಿರಗಳು ನಿರ್ಮಾಣವಾಗುತ್ತಿವೆ. ನಿರುದ್ಯೋಗದ ವಿರುದ್ಧ ಚಳವಳಿ ಬಲಿಷ್ಠವಾಗಿ ನಡೆಯಬೇಕಿದ್ದು, ಜೈಲಿಗೆ ಹೋಗಲು ಯುವಜನರು ಸಜ್ಜಾಗಬೇಕು’ ಎಂದು ತಿಳಿಸಿದರು.</p>.<p>‘ಹೈದರಾಬಾದ್ನಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿರುವುದು ಅಪಾಯಕಾರಿ ಬೆಳವಣಿಗೆ. ಪೊಲೀಸರೇ ಶಿಕ್ಷೆ ಕೊಡುವುದಾದರೆ ನ್ಯಾಯಾಂಗದ ಕೆಲಸ ಏನು’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>