‘ಕಬ್ಬನ್ ಉದ್ಯಾನದಲ್ಲಿರುವ ಕೇಂದ್ರ ಗ್ರಂಥಾಲಯ, ಬ್ಯಾಂಡ್ ಸ್ಟ್ಯಾಂಡ್ ಸೇರಿ ವಿವಿಧ ಭಾಗಗಳಲ್ಲಿರುವ ಬೃಹತ್ ಮರಗಳು ನೆಲಕ್ಕುರುಳಿದ್ದು, ಕೆಲ ಮರಗಳ ರಂಬೆ–ಕೊಂಬೆಗಳು ಬಿದ್ದಿವೆ. ಪ್ರತಿವರ್ಷ ಮಳೆಗಾಲದಲ್ಲಿ ಮರಗಳು ಬೀಳುವುದು ಸಹಜ. ಬಿಬಿಎಂಪಿಯಿಂದ ಅನುಮತಿ ಪಡೆದು ಅವುಗಳನ್ನು ತೆರವುಗೊಳಿಸಲಾಗುವುದು. ಬಿಬಿಎಂಪಿಯೇ ನಿಗದಿಪಡಿಸಿದ ಬೆಲೆಗೆ ಮರಗಳನ್ನು ಹರಾಜು ಹಾಕಲಾಗುತ್ತದೆ. ಬಿದ್ದ ಮರಗಳ ಸ್ಥಳದಲ್ಲಿ ಬೇರೆ ಸಸಿಗಳನ್ನು ನೆಡಲಾಗುವುದು’ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ (ಕಬ್ಬನ್ ಉದ್ಯಾನ) ಎಚ್.ಟಿ. ಬಾಲಕೃಷ್ಣ ಮಾಹಿತಿ ನೀಡಿದರು.