ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬನ್‌ ಉದ್ಯಾನ ಸಂರಕ್ಷಣಾ ಸಮಿತಿ ರಚನೆ

Published 2 ನವೆಂಬರ್ 2023, 19:42 IST
Last Updated 2 ನವೆಂಬರ್ 2023, 19:42 IST
ಅಕ್ಷರ ಗಾತ್ರ

ಬೆಂಗಳೂರು: ಕಬ್ಬನ್‌ ಉದ್ಯಾನವನ್ನು ಸಂರಕ್ಷಿಸುವ ಉದ್ದೇಶದಿಂದ ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಂರಕ್ಷಣಾ ಸಮಿತಿಯನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. 

ಈ ಸಮಿತಿಯು 33 ಸದಸ್ಯರನ್ನು ಒಳಗೊಂಡಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು, ತಜ್ಞರು, ವಾಯುವಿಹಾರಿಗಳು ಮತ್ತು ಪರಿಸರವಾದಿ ಇದ್ದಾರೆ.

ಕಬ್ಬನ್‌ ಉದ್ಯಾನದ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಹಾಗೂ ಪೂರಕ ಅಭಿವೃದ್ಧಿ ಕಾರ್ಯಚಟುವಟಿಕೆಗಳು ನಡೆಯುತ್ತಿವೆ. ಉದ್ಯಾನದ ಆವರಣದಲ್ಲಿ ನಡೆಯುವ ಚಟುವಟಿಕೆಗಳ ಸಾಧಕ–ಬಾಧಕಗಳನ್ನು ಪರಿಶೀಲಿಸಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಸಂಸ್ಥೆಗಳು ಬದ್ಧರಾಗಬೇಕು ಎಂದು ತಿಳಿಸಿದೆ.

ಉದ್ಯಾನ ವೈವಿದ್ಯಮಯ ಪ್ರಾಣಿ–ಪಕ್ಷಿಗಳ ಜೀವಸಂಕುಲಗಳಿಗೆ ನೆಲೆಯಾಗಿದೆ. ಈ ಉದ್ಯಾನವನ್ನು ಸಂರಕ್ಷಿಸುವುದು ಸರ್ಕಾರ ಹಾಗೂ ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ. ಗುರುವಾರ ಸಮಿತಿಯ ಪ್ರಥಮ ಸಭೆ ನಡೆಯಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT