ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶ

Last Updated 9 ಸೆಪ್ಟೆಂಬರ್ 2020, 19:49 IST
ಅಕ್ಷರ ಗಾತ್ರ

ಬೆಂಗಳೂರು: ವಾಹನ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಕಬ್ಬನ್ ಉದ್ಯಾನದಲ್ಲಿ ವಾಹನಗಳ ಸಂಚಾರಕ್ಕೆ ಬುಧವಾರದಿಂದ ಅನುಮತಿ ನೀಡಲಾಯಿತು.

ಕೊರೊನಾ ಕಾರಣಕ್ಕೆ ಉದ್ಯಾನದ ಪ್ರವೇಶದ್ವಾರಗಳನ್ನು ಮುಚ್ಚಿ, ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಪರಿಸರವಾದಿಗಳು ಹಾಗೂ ವಾಯುವಿಹಾರಿಗಳು ವಾಹನ ಸಂಚಾರ ಸಂಪೂರ್ಣ ನಿಷೇಧಿಸುವಂತೆ ಮೌನ ಪ್ರತಿಭಟನೆ ನಡೆಸುತ್ತಿದ್ದರು.

ವಾಹನ ಸಂಚಾರ ನಿರ್ಬಂಧಿಸುವಂತೆಪಾಲಿಕೆ, ತೋಟಗಾರಿಕೆ ಇಲಾಖೆ ಸಚಿವ ನಾರಾಯಣಗೌಡ ಸರ್ಕಾರಕ್ಕೆ ಮನವಿ ಮಾಡಿದ್ದರು.ಆದರೆ, ವಾಹನ ದಟ್ಟಣೆ ತಗ್ಗಿಸಲು ಉದ್ಯಾನದಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡುವಂತೆ ಸಂಚಾರ ಪೊಲೀಸರು ತೋಟಗಾರಿಕೆ ಇಲಾಖೆಗೆ ಮನವಿ ಮಾಡಿದ್ದರು.

'ಸರ್ಕಾರದ ಸೂಚನೆ ಮೇರೆಗೆ ಉದ್ಯಾನದಲ್ಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ' ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ (ಕಬ್ಬನ್) ಗುಣವಂತ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT