ಮಲ್ಲೇಶ್ವರದಲ್ಲಿರುವ ಸೇವಾ ಸದನದಲ್ಲಿ ಬುಧವಾರ ನಡೆದ ‘ಸಂಗೀತ ಸಂಭ್ರಮ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ‘ಎನ್ಇಪಿಯಲ್ಲಿ ನಮ್ಮತನಕ್ಕೆ ಒತ್ತು ಕೊಡಲಾಗಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಧಾಮಂತ್ರಿ ನರೇಂದ್ರ ಮೋದಿ ಅವರು ತರುತ್ತಿರುವ ಸಕಾರಾತ್ಮಕ ಬದಲಾವಣೆಗಳನ್ನು ರಾಜ್ಯ ಸರ್ಕಾರವು ಅಷ್ಟೇ ಉತ್ಸಾಹ ಮತ್ತು ಬದ್ಧತೆಗಳಿಂದ ಅನುಷ್ಠಾನಗೊಳಿಸುತ್ತಿದೆ. ಈ ಮೂಲಕ, ಸಾರ್ವಜನಿಕರು ಹಲವು ದಶಕಗಳಿಂದ ಎದುರು ನೋಡುತ್ತಿದ್ದಂತಹ ಪರಿವರ್ತನೆ ಬರುತ್ತಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಸಮಾಜದ ನಿಜವಾದ ಅಗತ್ಯಗಳೇನು ಎನ್ನುವುದನ್ನು ಪರಿಗಣನೆಗೆ ತೆಗೆದುಕೊಂಡು ಮುಂದಡಿ ಇಡಬೇಕು. ಎನ್ಇಪಿ ಜಾರಿಯಲ್ಲಿ ರಾಜ್ಯವು ಇಡೀ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ’ ಎಂದರು.