ಸರ್ಕಾರಿ ಕಲಾ ಕಾಲೇಜಿನ ಆವರಣದಲ್ಲಿ ಬಯಲು ರಂಗಮಂದಿರ ನಿರ್ಮಿಸಲು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ ಅನುಮತಿ ನೀಡಿದೆ ಎನ್ನುವ ಮಾತು ಈ ವಿವಾದದಲ್ಲಿ ಕೇಳಿಬಂದಿತ್ತು. ‘ಆ ರೀತಿಯ ಯಾವುದೇ ಅನುಮತಿ ನೀಡಿಲ್ಲ. ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಭಾವನಾ ರಾಮಣ್ಣ ಅವರ ಹೂವು ಪ್ರತಿಷ್ಠಾನಕ್ಕೆ ₹60 ಲಕ್ಷ ಅನುದಾನ ನೀಡಿದ್ದೇವೆ’ ಎಂದು ಇಲಾಖೆಯ ನಿರ್ದೇಶಕ ವಿಶು ಕುಮಾರ್ ಅವರು ಸ್ಪಷ್ಟಪಡಿಸಿದರು.