<p><strong>ಕೆಂಗೇರಿ</strong>: ‘ಬದುಕಿನ ಮಗ್ಗುಲನ್ನು ಬದಲಿಸುವ ಆಧ್ಯಾತ್ಮಿಕ ಕಾರ್ಯಕ್ರಮಗಳಿಗೆ ಜನ ಸಾಮಾನ್ಯರಿಂದ ಸೂಕ್ತ ಸ್ಪಂದನೆ ದೊರಕಬೇಕಿದೆ’ ಎಂದು ರಾಮೋಹಳ್ಳಿ ಸಿದ್ದಾರೂಢ ಮಿಷನ್ ಆಶ್ರಮದ ಆರೂಢಭಾರತಿ ಸ್ವಾಮೀಜಿ ಹೇಳಿದರು.</p>.<p>ಸಿದ್ದಾರೂಢ ಮಿಷನ್ ಆಶ್ರಮದ ರಜತ ಮಹೋತ್ಸವ ಹಾಗೂ ‘ಸಾಂಸ್ಕೃತಿಕ ಭವನ’ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಿದ್ದಾರೂಢ ಮಿಷನ್, ಕಳೆದ 25 ವರ್ಷಗಳಿಂದ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಆ ಮೂಲಕ ಸಮಾಜದಲ್ಲಿ ಏಕತೆ ಹಾಗೂ ಸೌಹಾರ್ದತೆ ತರಲು ತನ್ನದೇ ಆದ ರೀತಿಯಲ್ಲಿ ಶ್ರಮಿಸುತ್ತಿದೆ’ ಎಂದು ಹೇಳಿದರು.</p>.<p>‘ದೈನಂದಿನ ಜಂಜಾಟದ ನಡುವೆಯೂ ಜನರ ಮಾನಸಿಕತೆಯನ್ನು ಸರಿ ದಾರಿಗೆ ತರುವ ಧಾರ್ಮಿಕ ವಿಚಾರಧಾರೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.</p>.<p>ಇದೇ ವೇಳೆ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಹಲವು ಸಾಧಕರಿಗೆ ಆಶ್ರಮದ ವತಿಯಿಂದ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: ‘ಬದುಕಿನ ಮಗ್ಗುಲನ್ನು ಬದಲಿಸುವ ಆಧ್ಯಾತ್ಮಿಕ ಕಾರ್ಯಕ್ರಮಗಳಿಗೆ ಜನ ಸಾಮಾನ್ಯರಿಂದ ಸೂಕ್ತ ಸ್ಪಂದನೆ ದೊರಕಬೇಕಿದೆ’ ಎಂದು ರಾಮೋಹಳ್ಳಿ ಸಿದ್ದಾರೂಢ ಮಿಷನ್ ಆಶ್ರಮದ ಆರೂಢಭಾರತಿ ಸ್ವಾಮೀಜಿ ಹೇಳಿದರು.</p>.<p>ಸಿದ್ದಾರೂಢ ಮಿಷನ್ ಆಶ್ರಮದ ರಜತ ಮಹೋತ್ಸವ ಹಾಗೂ ‘ಸಾಂಸ್ಕೃತಿಕ ಭವನ’ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಿದ್ದಾರೂಢ ಮಿಷನ್, ಕಳೆದ 25 ವರ್ಷಗಳಿಂದ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಆ ಮೂಲಕ ಸಮಾಜದಲ್ಲಿ ಏಕತೆ ಹಾಗೂ ಸೌಹಾರ್ದತೆ ತರಲು ತನ್ನದೇ ಆದ ರೀತಿಯಲ್ಲಿ ಶ್ರಮಿಸುತ್ತಿದೆ’ ಎಂದು ಹೇಳಿದರು.</p>.<p>‘ದೈನಂದಿನ ಜಂಜಾಟದ ನಡುವೆಯೂ ಜನರ ಮಾನಸಿಕತೆಯನ್ನು ಸರಿ ದಾರಿಗೆ ತರುವ ಧಾರ್ಮಿಕ ವಿಚಾರಧಾರೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.</p>.<p>ಇದೇ ವೇಳೆ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಹಲವು ಸಾಧಕರಿಗೆ ಆಶ್ರಮದ ವತಿಯಿಂದ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>