ಈ ವೇಳೆ ಜನರ ಮನವೊಲಿಸಿದ ಮುತ್ತೂಟ್ ಫೈನಾನ್ಸ್ನ ವ್ಯವಸ್ಥಾಪಕ ನಿರ್ದೇಶಕರು, ‘ಪೊಲೀಸ್ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ. ಚಿನ್ನಾಭರಣ ಅಡಮಾನ ಇಟ್ಟಿರುವವರು ಆತಂಕಪಡುವ ಅಗತ್ಯವಿಲ್ಲ. ಘಟನೆ ಕುರಿತು ಸಂಸ್ಥೆಯ ಪ್ರಧಾನ ಕಚೇರಿಯ ಮುಖ್ಯಸ್ಥರಿಗೂ ಮಾಹಿತಿ ನೀಡಲಾಗಿದೆ. ಚಿನ್ನ ಹಿಂದಿರುಗಿಸಲು ಅಗತ್ಯ ವ್ಯವಸ್ಥೆ ಮಾಡಲಾಗುವುದು’ ಎಂದು ಭರವಸೆ ನೀಡಿದರು. ಇದೇ ವೇಳೆ ಕೆಲವು ಸಾರ್ವಜನಿಕರು, ಪೊಲೀಸರಿಗೂ ಮನವಿ ಮಾಡಿದರು.