<p><strong>ಬೆಂಗಳೂರು:</strong> ಸಾಮಾಜಿಕ ಜಾಲತಾಣ ಮೂಲಕ ವೈದ್ಯೆ ಸೋಗಿನಲ್ಲಿ ನಗರದ ನಿವಾಸಿ ಸೂರ್ಯಕಾಂತ್ ಎಂಬುವರನ್ನು ಪರಿಚಯಿಸಿಕೊಂಡಿದ್ದ ಮಹಿಳೆ, ಉಡುಗೊರೆ ಕಳುಹಿಸುವುದಾಗಿ ಹೇಳಿ ₹ 2 ಲಕ್ಷ ಪಡೆದು ವಂಚಿಸಿದ್ದಾರೆ.</p>.<p>ವಂಚನೆಗೀಡಾಗಿರುವ ಸೂರ್ಯಕಾಂತ್ ದಕ್ಷಿಣ ವಿಭಾಗ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಖಾಸಗಿ ಕಂಪನಿ ಉದ್ಯೋಗಿ ಸೂರ್ಯಕಾಂತ್ ಅವರಿಗೆ ಕೆಲ ದಿನಗಳ ಹಿಂದಷ್ಟೇ ಪ್ರಿಸ್ಟಿಲ್ಲಾ ಎಂಬ ಮಹಿಳೆ ಪರಿಚಯ ಆಗಿತ್ತು. ತಾವು ಇಂಗ್ಲೆಂಡ್ನಲ್ಲಿ ವೈದ್ಯ ಆಗಿರುವುದಾಗಿ ಮಹಿಳೆ ಹೇಳಿದ್ದರು. ಬಡವರಿಗೆ ಕೊರೊನಾ ಸೋಂಕು ಚಿಕಿತ್ಸೆಯನ್ನು ಉಚಿತವಾಗಿ ನೀಡಲು ಬೆಂಗಳೂರಿಗೆ ಬರುವುದಾಗಿಯೂ ತಿಳಿಸಿದ್ದರು. ಈ ಸಂಗತಿ ದೂರಿನಲ್ಲಿದೆ’ ಎಂದು ಪೊಲೀಸರು ಹೇಳಿದರು.</p>.<p>‘ನ. 11ರಂದು ಸೂರ್ಯಕಾಂತ್ ಅವರಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ‘ನಿಮ್ಮ ಸ್ನೇಹಿತ ಪ್ರಿಸ್ಟಿಲ್ಲಾ ಇಂಗ್ಲೆಂಡ್ನಿಂದ ಬಂದಿದ್ದಾರೆ. ₹ 3 ಕೋಟಿ ಮೌಲ್ಯದ ವಸ್ತುಗಳ ಜೊತೆ ಸಿಕ್ಕಿಬಿದ್ದಿದ್ದಾರೆ. ತೆರಿಗೆ ಪಾವತಿಸಿದರೆ ಬಿಟ್ಟು ಕಳುಹಿಸುತ್ತೇನೆ’ ಎಂದಿದ್ದ. ಅದನ್ನು ನಂಬಿದ್ದ ದೂರು<br />ದಾರ, ₹ 2 ಲಕ್ಷ ಸಂದಾಯ ಮಾಡಿದ್ದರು. ಅದಾದ ಬಳಿಕ ಮಹಿಳೆ ಸಂಪರ್ಕಕ್ಕೆ ಸಿಕ್ಕಿಲ್ಲ’ ಎಂದೂ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾಮಾಜಿಕ ಜಾಲತಾಣ ಮೂಲಕ ವೈದ್ಯೆ ಸೋಗಿನಲ್ಲಿ ನಗರದ ನಿವಾಸಿ ಸೂರ್ಯಕಾಂತ್ ಎಂಬುವರನ್ನು ಪರಿಚಯಿಸಿಕೊಂಡಿದ್ದ ಮಹಿಳೆ, ಉಡುಗೊರೆ ಕಳುಹಿಸುವುದಾಗಿ ಹೇಳಿ ₹ 2 ಲಕ್ಷ ಪಡೆದು ವಂಚಿಸಿದ್ದಾರೆ.</p>.<p>ವಂಚನೆಗೀಡಾಗಿರುವ ಸೂರ್ಯಕಾಂತ್ ದಕ್ಷಿಣ ವಿಭಾಗ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಖಾಸಗಿ ಕಂಪನಿ ಉದ್ಯೋಗಿ ಸೂರ್ಯಕಾಂತ್ ಅವರಿಗೆ ಕೆಲ ದಿನಗಳ ಹಿಂದಷ್ಟೇ ಪ್ರಿಸ್ಟಿಲ್ಲಾ ಎಂಬ ಮಹಿಳೆ ಪರಿಚಯ ಆಗಿತ್ತು. ತಾವು ಇಂಗ್ಲೆಂಡ್ನಲ್ಲಿ ವೈದ್ಯ ಆಗಿರುವುದಾಗಿ ಮಹಿಳೆ ಹೇಳಿದ್ದರು. ಬಡವರಿಗೆ ಕೊರೊನಾ ಸೋಂಕು ಚಿಕಿತ್ಸೆಯನ್ನು ಉಚಿತವಾಗಿ ನೀಡಲು ಬೆಂಗಳೂರಿಗೆ ಬರುವುದಾಗಿಯೂ ತಿಳಿಸಿದ್ದರು. ಈ ಸಂಗತಿ ದೂರಿನಲ್ಲಿದೆ’ ಎಂದು ಪೊಲೀಸರು ಹೇಳಿದರು.</p>.<p>‘ನ. 11ರಂದು ಸೂರ್ಯಕಾಂತ್ ಅವರಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ‘ನಿಮ್ಮ ಸ್ನೇಹಿತ ಪ್ರಿಸ್ಟಿಲ್ಲಾ ಇಂಗ್ಲೆಂಡ್ನಿಂದ ಬಂದಿದ್ದಾರೆ. ₹ 3 ಕೋಟಿ ಮೌಲ್ಯದ ವಸ್ತುಗಳ ಜೊತೆ ಸಿಕ್ಕಿಬಿದ್ದಿದ್ದಾರೆ. ತೆರಿಗೆ ಪಾವತಿಸಿದರೆ ಬಿಟ್ಟು ಕಳುಹಿಸುತ್ತೇನೆ’ ಎಂದಿದ್ದ. ಅದನ್ನು ನಂಬಿದ್ದ ದೂರು<br />ದಾರ, ₹ 2 ಲಕ್ಷ ಸಂದಾಯ ಮಾಡಿದ್ದರು. ಅದಾದ ಬಳಿಕ ಮಹಿಳೆ ಸಂಪರ್ಕಕ್ಕೆ ಸಿಕ್ಕಿಲ್ಲ’ ಎಂದೂ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>