<p><strong>ಬೆಂಗಳೂರು:</strong> ‘ಆನ್ಲೈನ್ ಮೂಲಕ ಪರಿಚಯವಾಗಿದ್ದ ಜ್ಯೋತಿಷಿಯೊಬ್ಬ ಪೂಜೆ ನೆಪದಲ್ಲಿ ₹ 15 ಲಕ್ಷ ಪಡೆದುಕೊಂಡು ವಂಚಿಸಿದ್ದಾನೆ’ ಎಂದು ಆರೋಪಿಸಿ ಯುವತಿಯೊಬ್ಬರು ಪೂರ್ವ ವಿಭಾಗದ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘ವಂಚನೆ ಸಂಬಂಧ ಸುಬ್ಬನಪಾಳ್ಯ ನಿವಾಸಿಯಾದ 28 ವರ್ಷದ ಯುವತಿ ದೂರು ನೀಡಿದ್ದಾರೆ. ಅಪರಿಚಿತನ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p class="Subhead"><strong>ದೂರಿನ ವಿವರ: </strong>‘ತಮ್ಮ ಭವಿಷ್ಯ ತಿಳಿದುಕೊಳ್ಳಲು ಇಚ್ಛಿಸಿದ್ದ ಯುವತಿ, ಜ್ಯೋತಿಷಿ ಮೊಬೈಲ್ ನಂಬರ್ಗಳಿಗಾಗಿ ಗೂಗಲ್ನಲ್ಲಿ ಹುಡುಕಾಡಿದ್ದರು. ಆರೋಪಿ ಜ್ಯೋತಿಷಿಯ ನಂಬರ್ ಸಿಕ್ಕಿತ್ತು. ಅದಕ್ಕೆ ಏಪ್ರಿಲ್ನಲ್ಲಿ ಕರೆ ಮಾಡಿದ್ದರು. ನಂತರ, ಹಲವರು ಬಾರಿ ಕರೆ ಮಾಡಿ ಮಾತನಾಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಯುವತಿಯ ಜನ್ಮ ದಿನಾಂಕ ಹಾಗೂ ಇತರೆ ವೈಯಕ್ತಿಕ ಮಾಹಿತಿ ಪಡೆದಿದ್ದ ಆರೋಪಿ, ‘ನಿಮಗೆ ಸಮಸ್ಯೆ ಇದೆ. ನಿಮ್ಮ ತಂದೆ-ತಾಯಿಗೆ ಹಾಗೂ ಮದುವೆಯಾಗಲಿರುವ ಹುಡುಗನಿಗೆ ಗಂಡಾಂತರವಿದೆ. ಇಡೀ ಕುಟುಂಬಕ್ಕೆ ಕಂಟಕವಿದ್ದು, ಪರಿಹಾರ ಪೂಜೆ ಮಾಡಿಸಬೇಕು. ಅದಕ್ಕೆ ₹15 ಲಕ್ಷ ಖರ್ಚಾಗುತ್ತದೆ’ ಎಂದಿದ್ದ.’</p>.<p>‘ಮಾತು ನಂಬಿದ್ದ ಯುವತಿ, ಹಂತ ಹಂತವಾಗಿ ₹ 15 ಲಕ್ಷವನ್ನು ಆತನ ಬ್ಯಾಂಕ್ ಖಾತೆಗೆ ಹಾಕಿದ್ದರು. ಹಣ ಪಡೆದ ನಂತರ ಆರೋಪಿಯೇ ನಾಪತ್ತೆಯಾಗಿದ್ದಾನೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಆನ್ಲೈನ್ ಮೂಲಕ ಪರಿಚಯವಾಗಿದ್ದ ಜ್ಯೋತಿಷಿಯೊಬ್ಬ ಪೂಜೆ ನೆಪದಲ್ಲಿ ₹ 15 ಲಕ್ಷ ಪಡೆದುಕೊಂಡು ವಂಚಿಸಿದ್ದಾನೆ’ ಎಂದು ಆರೋಪಿಸಿ ಯುವತಿಯೊಬ್ಬರು ಪೂರ್ವ ವಿಭಾಗದ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘ವಂಚನೆ ಸಂಬಂಧ ಸುಬ್ಬನಪಾಳ್ಯ ನಿವಾಸಿಯಾದ 28 ವರ್ಷದ ಯುವತಿ ದೂರು ನೀಡಿದ್ದಾರೆ. ಅಪರಿಚಿತನ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p class="Subhead"><strong>ದೂರಿನ ವಿವರ: </strong>‘ತಮ್ಮ ಭವಿಷ್ಯ ತಿಳಿದುಕೊಳ್ಳಲು ಇಚ್ಛಿಸಿದ್ದ ಯುವತಿ, ಜ್ಯೋತಿಷಿ ಮೊಬೈಲ್ ನಂಬರ್ಗಳಿಗಾಗಿ ಗೂಗಲ್ನಲ್ಲಿ ಹುಡುಕಾಡಿದ್ದರು. ಆರೋಪಿ ಜ್ಯೋತಿಷಿಯ ನಂಬರ್ ಸಿಕ್ಕಿತ್ತು. ಅದಕ್ಕೆ ಏಪ್ರಿಲ್ನಲ್ಲಿ ಕರೆ ಮಾಡಿದ್ದರು. ನಂತರ, ಹಲವರು ಬಾರಿ ಕರೆ ಮಾಡಿ ಮಾತನಾಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಯುವತಿಯ ಜನ್ಮ ದಿನಾಂಕ ಹಾಗೂ ಇತರೆ ವೈಯಕ್ತಿಕ ಮಾಹಿತಿ ಪಡೆದಿದ್ದ ಆರೋಪಿ, ‘ನಿಮಗೆ ಸಮಸ್ಯೆ ಇದೆ. ನಿಮ್ಮ ತಂದೆ-ತಾಯಿಗೆ ಹಾಗೂ ಮದುವೆಯಾಗಲಿರುವ ಹುಡುಗನಿಗೆ ಗಂಡಾಂತರವಿದೆ. ಇಡೀ ಕುಟುಂಬಕ್ಕೆ ಕಂಟಕವಿದ್ದು, ಪರಿಹಾರ ಪೂಜೆ ಮಾಡಿಸಬೇಕು. ಅದಕ್ಕೆ ₹15 ಲಕ್ಷ ಖರ್ಚಾಗುತ್ತದೆ’ ಎಂದಿದ್ದ.’</p>.<p>‘ಮಾತು ನಂಬಿದ್ದ ಯುವತಿ, ಹಂತ ಹಂತವಾಗಿ ₹ 15 ಲಕ್ಷವನ್ನು ಆತನ ಬ್ಯಾಂಕ್ ಖಾತೆಗೆ ಹಾಕಿದ್ದರು. ಹಣ ಪಡೆದ ನಂತರ ಆರೋಪಿಯೇ ನಾಪತ್ತೆಯಾಗಿದ್ದಾನೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>