<p><strong>ಬೆಂಗಳೂರು:</strong> ಯಲಹಂಕದಲ್ಲಿರುವ ಪ್ರಾಣಿಗಳ ರಕ್ಷಣೆ ಹಾಗೂ ಪುನರ್ವಸತಿ ಸಂಸ್ಥೆಯಿಂದ ನಾಯಿಮರಿ ದತ್ತು ಪಡೆಯಲು ಪ್ರಯತ್ನಿಸಿದ ವ್ಯಕ್ತಿಯೊಬ್ಬರು ಸೈಬರ್ ಕಳ್ಳರ ಬಲೆಗೆ ಬಿದ್ದು, ₹ 40 ಸಾವಿರ ಕಳೆದುಕೊಂಡಿದ್ದಾರೆ.</p>.<p>ಈ ಕುರಿತು ಪ್ರಮೋದ್ ಕುಮಾರ್ ಎಂಬುವವರು ವೈಟ್ಫೀಲ್ಡ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಎಫ್ಐಆರ್<br />ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p>ನಾಯಿ ಮರಿ ದತ್ತು ಪಡೆಯಲು ಪ್ರಮೋದ್ ಕುಮಾರ್ ಅವರು ಪುನರ್ವಸತಿ ಸಂಸ್ಥೆಯ ಸಂಪರ್ಕ ಸಂಖ್ಯೆ ಪಡೆಯಲು ಗೂಗಲ್ ಸರ್ಚ್ ಮಾಡಿದಾಗ ಒಂದು ಸಂಖ್ಯೆ ಸಿಕ್ಕಿದೆ.</p>.<p>ಅದಕ್ಕೆ ಕರೆ ಮಾಡಿದಾಗ ಕರೆ ಸ್ವೀಕರಿಸಿದ ವ್ಯಕ್ತಿ, ಸಂಸ್ಥೆಯ ಮಾಲೀಕರನ್ನು ಭೇಟಿಯಾಗಬೇಕಾದರೆ ₹10 ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕು ಎಂದು ತಿಳಿಸಿದ್ದಾನೆ.</p>.<p>ಬಳಿಕ ಅವರ ಮೊಬೈಲ್ಗೆ ಮೂರು ಸಂದೇಶಗಳನ್ನೂ ಕಳುಹಿಸಿದ್ದಾನೆ. ಆ ಸಂದೇಶಗಳಲ್ಲಿ ಇದ್ದ ಲಿಂಕ್ನ್ನು ಪ್ರಮೋದ್ ಕ್ಲಿಕ್ ಮಾಡಿದ ಐದು ನಿಮಿಷಗಳಲ್ಲೇ ಖಾತೆಯಿಂದ ₹ 40 ಸಾವಿರ ಕಡಿತಗೊಂಡಿರುವ ಬಗ್ಗೆ ಸಂದೇಶ ಬಂದಿದೆ.ಸಂದೇಶ ಬಂದ ನಂಬರ್ಗೆ ಮತ್ತೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಎಂದು ದೂರಿನಲ್ಲಿ ಪ್ರಮೋದ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಯಲಹಂಕದಲ್ಲಿರುವ ಪ್ರಾಣಿಗಳ ರಕ್ಷಣೆ ಹಾಗೂ ಪುನರ್ವಸತಿ ಸಂಸ್ಥೆಯಿಂದ ನಾಯಿಮರಿ ದತ್ತು ಪಡೆಯಲು ಪ್ರಯತ್ನಿಸಿದ ವ್ಯಕ್ತಿಯೊಬ್ಬರು ಸೈಬರ್ ಕಳ್ಳರ ಬಲೆಗೆ ಬಿದ್ದು, ₹ 40 ಸಾವಿರ ಕಳೆದುಕೊಂಡಿದ್ದಾರೆ.</p>.<p>ಈ ಕುರಿತು ಪ್ರಮೋದ್ ಕುಮಾರ್ ಎಂಬುವವರು ವೈಟ್ಫೀಲ್ಡ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಎಫ್ಐಆರ್<br />ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p>ನಾಯಿ ಮರಿ ದತ್ತು ಪಡೆಯಲು ಪ್ರಮೋದ್ ಕುಮಾರ್ ಅವರು ಪುನರ್ವಸತಿ ಸಂಸ್ಥೆಯ ಸಂಪರ್ಕ ಸಂಖ್ಯೆ ಪಡೆಯಲು ಗೂಗಲ್ ಸರ್ಚ್ ಮಾಡಿದಾಗ ಒಂದು ಸಂಖ್ಯೆ ಸಿಕ್ಕಿದೆ.</p>.<p>ಅದಕ್ಕೆ ಕರೆ ಮಾಡಿದಾಗ ಕರೆ ಸ್ವೀಕರಿಸಿದ ವ್ಯಕ್ತಿ, ಸಂಸ್ಥೆಯ ಮಾಲೀಕರನ್ನು ಭೇಟಿಯಾಗಬೇಕಾದರೆ ₹10 ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕು ಎಂದು ತಿಳಿಸಿದ್ದಾನೆ.</p>.<p>ಬಳಿಕ ಅವರ ಮೊಬೈಲ್ಗೆ ಮೂರು ಸಂದೇಶಗಳನ್ನೂ ಕಳುಹಿಸಿದ್ದಾನೆ. ಆ ಸಂದೇಶಗಳಲ್ಲಿ ಇದ್ದ ಲಿಂಕ್ನ್ನು ಪ್ರಮೋದ್ ಕ್ಲಿಕ್ ಮಾಡಿದ ಐದು ನಿಮಿಷಗಳಲ್ಲೇ ಖಾತೆಯಿಂದ ₹ 40 ಸಾವಿರ ಕಡಿತಗೊಂಡಿರುವ ಬಗ್ಗೆ ಸಂದೇಶ ಬಂದಿದೆ.ಸಂದೇಶ ಬಂದ ನಂಬರ್ಗೆ ಮತ್ತೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಎಂದು ದೂರಿನಲ್ಲಿ ಪ್ರಮೋದ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>