ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Cyber Crime | ಐಟಿ ಉದ್ಯೋಗಿಗೆ ಬೆದರಿಕೆ ಹಾಕಿ ₹3.7 ಕೋಟಿ ಸುಲಿಗೆ

Published 29 ನವೆಂಬರ್ 2023, 23:30 IST
Last Updated 29 ನವೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸುವುದಾಗಿ ಐ.ಟಿ ಕಂಪನಿ ಉದ್ಯೋಗಿಯೊಬ್ಬರಿಗೆ ಸೈಬರ್‌ ದಂಧೆಕೋರರು ಬೆದರಿಕೆ ಹಾಕಿ, ₹3.7 ಕೋಟಿ ಸುಲಿಗೆ ನಡೆಸಿರುವುದು ಪತ್ತೆಯಾಗಿದೆ. ವೈಟ್‌ಫೀಲ್ಡ್‌ನ ಇನ್ಪೊಸಿಸ್‌ ಕಾರ್ಯನಿರ್ವಾಹಕರೊಬ್ಬರು ಹಣ ಕಳೆದುಕೊಂಡಿದ್ದಾರೆ.

ಭಾರತೀಯ ದೂರಸಂಪರ್ಕ ಪ್ರಾಧಿಕಾರ, ಸಿಬಿಐ ಹಾಗೂ ಮುಂಬೈ ಪೊಲೀಸರ ಹೆಸರಿನಲ್ಲಿ ಕರೆ ಮಾಡಿರುವ ದಂಧೆಕೋರರು, ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಬಂಧಿಸುವುದಾಗಿ ಕರೆ ಮಾಡಿ ಬೆದರಿಸಿ ಸುಲಿಗೆ ಮಾಡಿದ್ದಾರೆ. ಈ ಸಂಬಂಧ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನ.21ರಂದು ವ್ಯಕ್ತಿಯೊಬ್ಬ ಕರೆ ಮಾಡಿ, ತಮ್ಮ ವಿರುದ್ಧ ಮುಂಬೈನಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲು ಮಾಡುವ ಬಗ್ಗೆ ಪ್ರಸ್ತಾಪಿಸಿದ್ದ. ಅದಾದ ಎರಡು ದಿನಗಳ ನಂತರ ಕರೆ ಮಾಡಿ ₹ 3.7 ಕೋಟಿ ನೀಡುವಂತೆ ಬೆದರಿಕೆ ಹಾಕಿ ವಿವಿಧ ಬ್ಯಾಂಕ್‌ ಖಾತೆಗಳ ಸಂಖ್ಯೆಗಳನ್ನು ನೀಡಿದ್ದ’ ಎಂದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

‘ಹಣ ವರ್ಗಾವಣೆ ಮಾಡಿದರೆ ನಿಮ್ಮ ಮೇಲಿರುವ ಎಲ್ಲ ಪ್ರಕರಣ ರದ್ದು ಮಾಡಲಾಗುವುದು. ಜತೆಗೆ, ಲೆಕ್ಕ ಪರಿಶೋಧನೆಯಾದ ಮೇಲೆ ತಮ್ಮ ಬ್ಯಾಂಕ್‌ ಖಾತೆಗಳಿಗೇ ಹಣವನ್ನು ವಾಪಸ್ ಹಾಕಲಾಗುವುದು ಎಂದು ನಂಬಿಸಿದ್ದರು. ಅದರಂತೆ ಎಕ್ಸಿಕ್ಯುಟಿವ್ ಹಣ ವರ್ಗಾವಣೆ ಮಾಡಿದ್ದರು’

‘ಸೈಬರ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಹಣ ವರ್ಗಾವಣೆ ಮಾಡಿರುವ ಆರೋಪಿಗಳ ಬ್ಯಾಂಕ್‌ ಖಾತೆಗಳ ವ್ಯವಹಾರ ಸ್ಥಗಿತಗೊಳಿಸುವಂತೆ ಬ್ಯಾಂಕ್‌ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT