<p><strong>ಬೆಂಗಳೂರು: ‘</strong>ದೇಶದ ಭದ್ರತೆ ಮತ್ತು ಸುರಕ್ಷತೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದು. ಪೊಲೀಸರು ಪ್ರಾಮಾಣಿಕ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಬೇಕು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ತಿಳಿಸಿದರು.</p>.<p>ಥಣಿಸಂದ್ರದ ಪೊಲೀಸ್ ತರಬೇತಿ ಶಾಲಾ ಆವರಣದಲ್ಲಿ ಆಯೋಜಿಸಿದ್ದ 8ನೇ ತಂಡದ 416 ನಾಗರಿಕ ಪೊಲೀಸ್ ಕಾನ್ಸ್ಟೆಬಲ್ಗಳ ನಿರ್ಗಮನ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಆಧುನಿಕ ಯುಗದಲ್ಲಿ ತಂತ್ರಜ್ಞಾನ ಬದಲಾಗುತ್ತಿದೆ. ಮೌಲ್ಯಗಳು, ಆದರ್ಶಗಳು ಸದಾ ಮಾರ್ಗದರ್ಶನ ಆಗಬೇಕು. ಉತ್ತಮ ಮೌಲ್ಯಗಳನ್ನು ಆದರ್ಶವಾಗಿ ತೆಗೆದುಕೊಂಡಾಗ ಮಾತ್ರ ಪೊಲೀಸ್ ಇಲಾಖೆ ಉತ್ತಮ ಸ್ಥಾನ ಪಡೆಯಲು ಸಾಧ್ಯವಾಗುತ್ತದೆ’ ಎಂದರು.</p>.<p>‘ತಂತ್ರಜ್ಞಾನ ಬೆಳವಣಿಗೆ ಆದಂತೆ ಅಪರಾಧಗಳ ಸ್ವರೂಪವೂ ಸಹ ಬದಲಾಗಿದೆ. ಸೈಬರ್ ಅಪರಾಧಗಳು, ದರೋಡೆ, ಸುಲಿಗೆ, ಕೊಲೆಯಂತಹ ಗಂಭೀರ ಪ್ರಕರಣಗಳನ್ನು ಪತ್ತೆ ಹಚ್ಚಲು ಸನ್ನದ್ಧರಾಗಿರಬೇಕು. ಸೈಬರ್ ಅಪರಾಧ ನಿಯಂತ್ರಿಸಲು ಹೊಸ ತಂತ್ರಜ್ಞಾನಕ್ಕೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ಪ್ರಶಿಕ್ಷಣಾರ್ಥಿಗಳು ಸಜ್ಜಾಗಬೇಕು’ ಎಂದರು.</p>.<p>ಥಣಿಸಂದ್ರ ಪೊಲೀಸ್ ತರಬೇತಿ ಶಾಲೆಯ ಎಸ್ಪಿ ಎಂ. ಬಾಬು ಅವರು ಪ್ರತಿಜ್ಞಾವಿಧಿ ಬೋಧಿಸಿದರು.</p>.<p>ಪ್ರಶಿಕ್ಷಣಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ನಂತರ, ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಪ್ರಶಿಕ್ಷಣಾರ್ಥಿಗಳಿಗೆ ಸಲೀಂ ಅವರು ಬಹುಮಾನ ವಿತರಿಸಿದರು. ನಂತರ, ‘ಹೆಜ್ಜೆ ಗುರುತು’ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ದೇಶದ ಭದ್ರತೆ ಮತ್ತು ಸುರಕ್ಷತೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದು. ಪೊಲೀಸರು ಪ್ರಾಮಾಣಿಕ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಬೇಕು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ತಿಳಿಸಿದರು.</p>.<p>ಥಣಿಸಂದ್ರದ ಪೊಲೀಸ್ ತರಬೇತಿ ಶಾಲಾ ಆವರಣದಲ್ಲಿ ಆಯೋಜಿಸಿದ್ದ 8ನೇ ತಂಡದ 416 ನಾಗರಿಕ ಪೊಲೀಸ್ ಕಾನ್ಸ್ಟೆಬಲ್ಗಳ ನಿರ್ಗಮನ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಆಧುನಿಕ ಯುಗದಲ್ಲಿ ತಂತ್ರಜ್ಞಾನ ಬದಲಾಗುತ್ತಿದೆ. ಮೌಲ್ಯಗಳು, ಆದರ್ಶಗಳು ಸದಾ ಮಾರ್ಗದರ್ಶನ ಆಗಬೇಕು. ಉತ್ತಮ ಮೌಲ್ಯಗಳನ್ನು ಆದರ್ಶವಾಗಿ ತೆಗೆದುಕೊಂಡಾಗ ಮಾತ್ರ ಪೊಲೀಸ್ ಇಲಾಖೆ ಉತ್ತಮ ಸ್ಥಾನ ಪಡೆಯಲು ಸಾಧ್ಯವಾಗುತ್ತದೆ’ ಎಂದರು.</p>.<p>‘ತಂತ್ರಜ್ಞಾನ ಬೆಳವಣಿಗೆ ಆದಂತೆ ಅಪರಾಧಗಳ ಸ್ವರೂಪವೂ ಸಹ ಬದಲಾಗಿದೆ. ಸೈಬರ್ ಅಪರಾಧಗಳು, ದರೋಡೆ, ಸುಲಿಗೆ, ಕೊಲೆಯಂತಹ ಗಂಭೀರ ಪ್ರಕರಣಗಳನ್ನು ಪತ್ತೆ ಹಚ್ಚಲು ಸನ್ನದ್ಧರಾಗಿರಬೇಕು. ಸೈಬರ್ ಅಪರಾಧ ನಿಯಂತ್ರಿಸಲು ಹೊಸ ತಂತ್ರಜ್ಞಾನಕ್ಕೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ಪ್ರಶಿಕ್ಷಣಾರ್ಥಿಗಳು ಸಜ್ಜಾಗಬೇಕು’ ಎಂದರು.</p>.<p>ಥಣಿಸಂದ್ರ ಪೊಲೀಸ್ ತರಬೇತಿ ಶಾಲೆಯ ಎಸ್ಪಿ ಎಂ. ಬಾಬು ಅವರು ಪ್ರತಿಜ್ಞಾವಿಧಿ ಬೋಧಿಸಿದರು.</p>.<p>ಪ್ರಶಿಕ್ಷಣಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ನಂತರ, ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಪ್ರಶಿಕ್ಷಣಾರ್ಥಿಗಳಿಗೆ ಸಲೀಂ ಅವರು ಬಹುಮಾನ ವಿತರಿಸಿದರು. ನಂತರ, ‘ಹೆಜ್ಜೆ ಗುರುತು’ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>