ಸೈಕಲ್ ರವಿ ಸಹಚರರು ಸಿಸಿಬಿ ಬಲೆಗೆ

ಬೆಂಗಳೂರು: ನಗರದಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರೌಡಿ ಸೈಕಲ್ ರವಿಯ ಸಹಚರರನ್ನು ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದಾರೆ. ಗಂಗಾಧರ ಅಲಿಯಾಸ್ ಕರಿ ಗಂಗಾಧರ್, ಶಿವಕುಮಾರ್, ಅರ್ಜುನ್, ಮಂಜುನಾಥ್ ಹಾಗೂ ನರೇಶ್ ಬಂಧಿತರು.
ಅವರಿಂದ ಕಾರು, ತಲಾ ಎರಡು ಲಾಂಗ್, ದೊಣ್ಣೆ ಹಾಗೂ ಕತ್ತಿಯನ್ನು ಜಪ್ತಿ ಮಾಡಲಾಗಿದೆ. ‘ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು, ಹಣಕ್ಕಾಗಿ ದರೋಡೆ ಮಾಡಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.