ಬೆಂಗಳೂರು: ₹ 4 ಲಕ್ಷ ಮೌಲ್ಯದ 17 ಸೈಕಲ್ಗಳನ್ನು ಕಳ್ಳತನ ಮಾಡಿದ್ದ ಆರೋಪದಡಿ ಭದ್ರತಾ ಸಿಬ್ಬಂದಿ ಸ್ವಾದೀನ್ ರೌತ್ರಾ (25) ಎಂಬುವವರನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಒಡಿಶಾದ ಸ್ವಾದೀನ್, ನಾಲ್ಕು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ. ಭದ್ರತಾ ಸಿಬ್ಬಂದಿ ಆಗಿ ಕೆಲಸಕ್ಕೆ ಸೇರಿದ್ದ. ದುಡಿಮೆಯ ವೇತನ ಸಾಲುತ್ತಿರಲಿಲ್ಲ. ಹೀಗಾಗಿ, ದುಬಾರಿ ಬೆಲೆಯ ಸೈಕಲ್ಗಳನ್ನು ಕದ್ದು ಮಾರುತ್ತಿದ್ದ’ ಎಂದು ಪೊಲೀಸರು ಹೇಳಿದರು.
‘ಓಎಂಬಿಆರ್ ಲೇಔಟ್ನ ಮನೆಯೊಂದರ ಮುಂದೆ ನಿಲ್ಲಿಸಿದ್ದ ಸೈಕಲ್ ಇತ್ತೀಚೆಗೆ ಕಳುವಾಗಿತ್ತು. ಈ ಬಗ್ಗೆ ದಾಖಲಾದ ದೂರು ಆಧರಿಸಿ ತನಿಖೆ ಕೈಗೊಂಡಾಗ, ಆರೋಪಿ ಸಿಕ್ಕಿಬಿದ್ದ’ ಎಂದರು.