ಬೆಂಗಳೂರು:ಹುಟ್ಟುಹಬ್ಬ ಸಮಾರಂಭದ ಅಲಂಕಾರಕ್ಕಾಗಿ ಬಲೂನ್ಗಳಿಗೆ ಗ್ಯಾಸ್ ತುಂಬಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು, ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ತಮಿಳುನಾಡಿನದಿನೇಶ್ ಮೃತ ಯುವಕ. ಇಲ್ಲಿನ ರಿಚ್ಮಂಡ್ ವೃತ್ತದ ಬಳಿಯ ಖಾಸಗಿ ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ಹುಟ್ಟುಹಬ್ಬವೊಂದರ ಆಚರಣೆಗೆ ಬಲೂನ್ ಪೂರೈಸಲು ದಿನೇಶ್ ಬಂದಿದ್ದರು.
ಅಪಾರ್ಟ್ಮೆಂಟ್ ಸಮುಚ್ಚಯದ ಆವರಣದಲ್ಲಿ ಬಲೂನ್ಗಳಿಗೆ ಗಾಳಿ ತುಂಬಿಸುತ್ತಿದ್ದಾಗ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿತು. ದಿನೇಶ್ ಅವರ ದೇಹ ಛಿದ್ರವಾಯಿತು. ಸ್ಥಳಕ್ಕೆ ಅಶೋಕನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.