<p><strong>ಬೆಂಗಳೂರು:</strong> ಕುಮಾರಸ್ವಾಮಿ ಠಾಣೆ ವ್ಯಾಪ್ತಿಯ ಯಲಚೇನಹಳ್ಳಿಯ ಮನೆಯೊಂದರಲ್ಲಿ ಶನಿವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>‘ಗೌತಮ್, ಮಂದಿಲ್ ಹಾಗೂ ಸೋನಿ ಗಾಯಗೊಂಡವರು. ತೀವ್ರ ಸುಟ್ಟ ಗಾಯಗಳಾಗಿರುವ ಮೂವರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಬಿಹಾರದ ಗೌತಮ್ ಹಾಗೂ ಮಂದಿಲ್ ವರ್ಷದ ಹಿಂದೆಯಷ್ಟೇ ನಗರಕ್ಕೆ ಬಂದಿದ್ದರು. ಏಜೆನ್ಸಿ ಮೂಲಕ ಭದ್ರತಾ ಸಿಬ್ಬಂದಿ ಆಗಿ ಕೆಲಸ ಆರಂಭಿಸಿದ್ದರು. ಯಲಚೇನಹಳ್ಳಿಯಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದರು. ಅವರ ಪಕ್ಕದ ಮನೆಯಲ್ಲೇ ಕುಟುಂಬದ ಜೊತೆ ಮಹಿಳೆ ಸೋನಿ ನೆಲೆಸಿದ್ದರು’ ಎಂದು ತಿಳಿಸಿದರು.</p>.<p>‘ಸೋನಿ ಅವರು ಬೆಳಿಗ್ಗೆ ಬಟ್ಟೆ ಒಣ ಹಾಕಲೆಂದು ಹೊರಗೆ ಬಂದಿದ್ದರು. ಇದೇ ಸಂದರ್ಭದಲ್ಲೇ ಕೊಠಡಿಯಲ್ಲಿ ಸ್ಫೋಟ ಸಂಭವಿಸಿತ್ತು. ಕೊಠಡಿಯಲ್ಲಿದ್ದ ಗೌರಮ್, ಮಂದಿಲ್ ಹಾಗೂ ಹೊರಗೆ ಇದ್ದ ಸೋನಿ ಅವರಿಗೆ ಬೆಂಕಿ ತಗುಲಿ ಗಾಯವಾಯಿತು’ ಎಂದೂ<br />ಹೇಳಿದರು.</p>.<p><strong>ಮನೆಯಲ್ಲಿ ಪರಿಶೀಲನೆ:</strong> ‘ಸ್ಫೋಟ ಸಂಭವಿಸುತ್ತಿದ್ದಂತೆ ಜೋರಾದ ಶಬ್ದ ಬಂದಿತ್ತು. ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಪರಿಶೀಲಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.</p>.<p>‘ಕೊಠಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಇತ್ತು. ಅದೇ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಕೊಠಡಿಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟಿದ್ದು, ಕಿಟಕಿಗಳು ಒಡೆದಿವೆ’ ಎಂದು<br />ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕುಮಾರಸ್ವಾಮಿ ಠಾಣೆ ವ್ಯಾಪ್ತಿಯ ಯಲಚೇನಹಳ್ಳಿಯ ಮನೆಯೊಂದರಲ್ಲಿ ಶನಿವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>‘ಗೌತಮ್, ಮಂದಿಲ್ ಹಾಗೂ ಸೋನಿ ಗಾಯಗೊಂಡವರು. ತೀವ್ರ ಸುಟ್ಟ ಗಾಯಗಳಾಗಿರುವ ಮೂವರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಬಿಹಾರದ ಗೌತಮ್ ಹಾಗೂ ಮಂದಿಲ್ ವರ್ಷದ ಹಿಂದೆಯಷ್ಟೇ ನಗರಕ್ಕೆ ಬಂದಿದ್ದರು. ಏಜೆನ್ಸಿ ಮೂಲಕ ಭದ್ರತಾ ಸಿಬ್ಬಂದಿ ಆಗಿ ಕೆಲಸ ಆರಂಭಿಸಿದ್ದರು. ಯಲಚೇನಹಳ್ಳಿಯಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದರು. ಅವರ ಪಕ್ಕದ ಮನೆಯಲ್ಲೇ ಕುಟುಂಬದ ಜೊತೆ ಮಹಿಳೆ ಸೋನಿ ನೆಲೆಸಿದ್ದರು’ ಎಂದು ತಿಳಿಸಿದರು.</p>.<p>‘ಸೋನಿ ಅವರು ಬೆಳಿಗ್ಗೆ ಬಟ್ಟೆ ಒಣ ಹಾಕಲೆಂದು ಹೊರಗೆ ಬಂದಿದ್ದರು. ಇದೇ ಸಂದರ್ಭದಲ್ಲೇ ಕೊಠಡಿಯಲ್ಲಿ ಸ್ಫೋಟ ಸಂಭವಿಸಿತ್ತು. ಕೊಠಡಿಯಲ್ಲಿದ್ದ ಗೌರಮ್, ಮಂದಿಲ್ ಹಾಗೂ ಹೊರಗೆ ಇದ್ದ ಸೋನಿ ಅವರಿಗೆ ಬೆಂಕಿ ತಗುಲಿ ಗಾಯವಾಯಿತು’ ಎಂದೂ<br />ಹೇಳಿದರು.</p>.<p><strong>ಮನೆಯಲ್ಲಿ ಪರಿಶೀಲನೆ:</strong> ‘ಸ್ಫೋಟ ಸಂಭವಿಸುತ್ತಿದ್ದಂತೆ ಜೋರಾದ ಶಬ್ದ ಬಂದಿತ್ತು. ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಪರಿಶೀಲಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.</p>.<p>‘ಕೊಠಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಇತ್ತು. ಅದೇ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಕೊಠಡಿಯಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟಿದ್ದು, ಕಿಟಕಿಗಳು ಒಡೆದಿವೆ’ ಎಂದು<br />ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>