<p><strong>ಬೆಂಗಳೂರು:</strong> ಎಂ.ಎಸ್.ರಾಮಯ್ಯ(ಎಂಎಸ್ಆರ್) ನಗರದ ಟಿಬೆಟಿಯನ್ ಫಾಸ್ಟ್ ಫುಡ್ ಸೆಂಟರ್ನಲ್ಲಿ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಗುರುವಾರ ಬೆಳಿಗ್ಗೆ 7.30ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಕಟ್ಟಡಕ್ಕೆ ಹಾನಿಯಾಗಿದೆ. ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿ ಆಗಿ ಬಿದ್ದಿದ್ದವು. ಸ್ಫೋಟದ ಶಬ್ದಕ್ಕೆ ಅಕ್ಕಪಕ್ಕದ ನಿವಾಸಿಗಳು ಬೆಚ್ಚಿಬಿದ್ದಿದ್ದರು.</p><p>ಸ್ಫೋಟದ ರಭಸಕ್ಕೆ ಬಹುಮಹಡಿ ಕಟ್ಟಡದಲ್ಲಿದ್ದ ಎರಡು ಮಳಿಗೆಯ ಕಬ್ಬಿಣದ ಶೆಟರ್ ಕುಸಿದು ರಸ್ತೆಯ ಬದಿಗೆ ಬಿದ್ದಿತ್ತು. ಕಟ್ಟಡಕ್ಕೂ ಹಾನಿಯಾಗಿದೆ. ಪಕ್ಕದಲ್ಲೇ ಇದ್ದ ರಾಮಯ್ಯ ಸಂಸ್ಥೆಯ ಕಟ್ಟಡದ ಕಿಟಕಿಯ ಗಾಜುಗಳು ಪುಡಿಯಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p><p>ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಫಾಸ್ಟ್ ಫುಡ್ ಸೆಂಟರ್ ಬಂದ್ ಮಾಡಿ ಮಾಲೀಕ ಮನೆಗೆ ತೆರಳಿದ್ದರು. ಬೆಳಿಗ್ಗೆ ಸ್ಪೋಟ ಸಂಭವಿಸಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆ ಘಟನೆ ನಡೆದಿದ್ದರೆ ಹೆಚ್ಚಿನ ಅಪಾಯ ಸಂಭವಿಸುವ ಸಾಧ್ಯತೆಯಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದರು.</p><p>ಕಟ್ಟಡ ಹಳೆಯದಾಗಿದ್ದು, ಸ್ಫೋಟದಿಂದ ಕುಸಿಯುವ ಭೀತಿ ಎದುರಾಗಿದೆ. ಕಟ್ಟಡದಲ್ಲಿದ್ದವರನ್ನು ಸ್ಥಳಾಂತರ ಮಾಡಲಾಗಿದೆ.</p><p>ಸದಾಶಿವನಗರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p><p>‘ಅನಿಲ ಸೋರಿಕೆಯ ಕಾರಣ ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಂ.ಎಸ್.ರಾಮಯ್ಯ(ಎಂಎಸ್ಆರ್) ನಗರದ ಟಿಬೆಟಿಯನ್ ಫಾಸ್ಟ್ ಫುಡ್ ಸೆಂಟರ್ನಲ್ಲಿ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಗುರುವಾರ ಬೆಳಿಗ್ಗೆ 7.30ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಕಟ್ಟಡಕ್ಕೆ ಹಾನಿಯಾಗಿದೆ. ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿ ಆಗಿ ಬಿದ್ದಿದ್ದವು. ಸ್ಫೋಟದ ಶಬ್ದಕ್ಕೆ ಅಕ್ಕಪಕ್ಕದ ನಿವಾಸಿಗಳು ಬೆಚ್ಚಿಬಿದ್ದಿದ್ದರು.</p><p>ಸ್ಫೋಟದ ರಭಸಕ್ಕೆ ಬಹುಮಹಡಿ ಕಟ್ಟಡದಲ್ಲಿದ್ದ ಎರಡು ಮಳಿಗೆಯ ಕಬ್ಬಿಣದ ಶೆಟರ್ ಕುಸಿದು ರಸ್ತೆಯ ಬದಿಗೆ ಬಿದ್ದಿತ್ತು. ಕಟ್ಟಡಕ್ಕೂ ಹಾನಿಯಾಗಿದೆ. ಪಕ್ಕದಲ್ಲೇ ಇದ್ದ ರಾಮಯ್ಯ ಸಂಸ್ಥೆಯ ಕಟ್ಟಡದ ಕಿಟಕಿಯ ಗಾಜುಗಳು ಪುಡಿಯಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p><p>ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಫಾಸ್ಟ್ ಫುಡ್ ಸೆಂಟರ್ ಬಂದ್ ಮಾಡಿ ಮಾಲೀಕ ಮನೆಗೆ ತೆರಳಿದ್ದರು. ಬೆಳಿಗ್ಗೆ ಸ್ಪೋಟ ಸಂಭವಿಸಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆ ಘಟನೆ ನಡೆದಿದ್ದರೆ ಹೆಚ್ಚಿನ ಅಪಾಯ ಸಂಭವಿಸುವ ಸಾಧ್ಯತೆಯಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದರು.</p><p>ಕಟ್ಟಡ ಹಳೆಯದಾಗಿದ್ದು, ಸ್ಫೋಟದಿಂದ ಕುಸಿಯುವ ಭೀತಿ ಎದುರಾಗಿದೆ. ಕಟ್ಟಡದಲ್ಲಿದ್ದವರನ್ನು ಸ್ಥಳಾಂತರ ಮಾಡಲಾಗಿದೆ.</p><p>ಸದಾಶಿವನಗರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p><p>‘ಅನಿಲ ಸೋರಿಕೆಯ ಕಾರಣ ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>